ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಸಭೆ 
ರಾಜ್ಯ

ಬೆಂಗಳೂರು, ಕೋಲಾರ ಜಿಲ್ಲೆಯ ಶಾಸಕರು, ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಭೆ

ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು. 

ಬೆಂಗಳೂರು: ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು. 

ಮೊದಲಿಗೆ ಬೆಂಗಳೂರು ನಗರ ಜಿಲ್ಲೆಯ ಶಾಸಕರುಗಳ ಜೊತೆಗೆ ನಡೆದ ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳು-ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಮತ್ತು ಚುನಾವಣೆ ಕುರಿತು ಚರ್ಚೆ ನಡೆಸಿದರು.

ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದ ಡಿ ಕೆ ಸುರೇಶ್, ಶಾಸಕರಾದ ಕೃಷ್ಣಪ್ಪ, ಎ. ಸಿ. ಶ್ರೀನಿವಾಸ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಎಂಎಲ್ಸಿ ಗಳಾದ ಯು ಬಿ ವೆಂಕಟೇಶ್, ನಾಗರಾಜ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು.

ನಂತರ ಕೋಲಾರ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಲೋಕಸಭಾ ಚುನಾವಣೆ ಕುರಿತಾಗಿ ಶಾಸಕರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಎಲ್ಲಾ ಶಾಸಕರ ಸರ್ವ ಒಮ್ಮತದ ಅಭ್ಯರ್ಥಿಯನ್ನು ಲೋಕಸಭಾ ಕಣಕ್ಕೆ ಇಳಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸುವುದಾಗಿ ಎಲ್ಲಾ ಶಾಸಕರೂ ಭರವಸೆಯ ಮಾತುಗಳನ್ನಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ; ಈ ಬಗ್ಗೆ ಸ್ವತಃ ಸಿಎಂ ಹೇಳಿದ್ದೇನು?

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; KDP ಸಭೆಯಲ್ಲಿ ಕೈ ಕೈ ಮಿಲಾಯಿಸಿದ BJP ಶಾಸಕ, Congress MLC, Video Viral!

ಒಮನ್‌ನಲ್ಲಿ ಟ್ರೆಕ್ಕಿಂಗ್ ದುರಂತ: ಮಲಯಾಳಂ ಹಿನ್ನೆಲೆ ಗಾಯಕಿ 'ಚಿತ್ರಾ ಅಯ್ಯರ್' ಸಹೋದರಿ ಸಾವು!

ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

ದೇಶದ್ರೋಹ ಆರೋಪ: ಸುಪ್ರೀಕೋರ್ಟ್ ಜಾಮೀನು ನಿರಾಕರಣೆ, ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..!

SCROLL FOR NEXT