ಎಸ್.ಎಸ್.ಮಲ್ಲಿಕಾರ್ಜುನ್ 
ರಾಜ್ಯ

ಜಾತಿ ನಿಂದನೆ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ದೂರು

ಸಂದರ್ಶನವೊಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿಯಲ್ಲಿ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ವ್ಯಕ್ತಿಯೊಬ್ಬರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಸಂದರ್ಶನವೊಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿಯಲ್ಲಿ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ವ್ಯಕ್ತಿಯೊಬ್ಬರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮರಿಯಪ್ಪನ ಪಾಳ್ಯದ ಎಸ್.ಎಂ.ದಿವಾಕರ್ ಎಂಬುವರು ನೀಡಿದ ದೂರಿನ ಮೇರೆಗೆ ಸಚಿವರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‍ಸಿಆರ್) ದಾಖಲಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಖಾಸಗಿ ಚಾನೆಲ್‍ನ ಸಂದರ್ಶನವೊಂದರಲ್ಲಿ ಮಾತನಾಡುವಾಗ ಸಚಿವರು ‘ಊರನ್ನು ಹೊಲಗೇರಿ ಮಾಡಬೇಡಿ’ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದೊಂದು ಸೂಕ್ಷ್ಮ ಪ್ರಕರಣ. ದಿವಾಕರ್ ಅವರಿಂದ ದೂರು ಸ್ವೀಕರಿಸಿ ಪರಿಶೀಲನೆ ನಡೆಸಲಾಯಿತು. ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಅಭಿಪ್ರಾಯದಂತೆ, ದೂರನ್ನು ವಿಧಾನಸೌಧ ಠಾಣೆಗೆ ವರ್ಗಾಯಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಸಚಿವ ಮಲ್ಲಿಕಾರ್ಜುನ್ ವಿರುದ್ಧ ಸದ್ಯಕ್ಕೆ ಎಫ್‌ಐಆರ್ ದಾಖಲಾಗಿಲ್ಲ. ವಿಧಾನಸೌಧ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ತಿಳಿದು ಬಂದಿದೆ. ವಿಧಾನಸೌಧ ಠಾಣೆ ಪೊಲೀಸರು, ‘ದೂರು ಪರಿಶೀಲಿಸಿ ಮುಂದಿನ ಕ್ರಮ’ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT