ಸಂಗ್ರಹ ಚಿತ್ರ 
ರಾಜ್ಯ

ನವೆಂಬರ್ 2 ರಿಂದ 15ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ: ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ

ನವೆಂಬರ್ 2ರಿಂದ 15ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ‌ಬಾರಿ ದಿನದ 24 ಗಂಟೆಯೂ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಹಾಸನ: ನವೆಂಬರ್ 2ರಿಂದ 15ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ‌ಬಾರಿ ದಿನದ 24 ಗಂಟೆಯೂ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಹಾಸನಂಬಾ ಜಾತ್ರಾ ಮಹೋತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು, ಮಂಗಳವಾರ ಪೂರ್ವಭಾವಿ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಳೆದ ವರ್ಷ ದೇವಾಲಯಕ್ಕೆ 6 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು ಆಗಮಿಸಿದ್ದರು. ಶಕ್ತಿ ಯೋಜನೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚು ಜನರು ಭೇಟಿ ನೀಡುವ ಸಾಧ್ಯತೆಗಳಿವೆ. ಈ ಬಾರಿ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸುವ ಸಾಧ್ಯತೆಗಳಿವೆ. ಹೆಚ್ಚು ಭಕ್ತರು ಆಗಮಿಸುವುದರಿಂದ ಹಾಸನಾಂಬೆ ಮಹೋತ್ಸವ ವೈಭವದಿಂದ ನಡೆಸಲಾಗುತ್ತದೆ. ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ ಅಚ್ಚುಕಟ್ಟಾಗಿ ಸಿದ್ಧತೆ ನಡೆಯಬೇಕು, ಯಾವುದೇ ಕುಂದುಕೊರತೆ ಮತ್ತು ಗಡಿಬಿಡಿ ಆಗಬಾರದೆಂದು ಸೂಚನೆ ನೀಡಿದರು.

ಒಟ್ಟು 14 ದಿನಗಳು ದೇವಿಯ ದೇಗುಲದ ಬಾಗಿಲು ತೆರೆಯಲಿದ್ದು, ಮೊದಲ ಹಾಗೂ ಕೊನೆಯ ದಿನ ಪೂಜಾ ವಿಧಿ ವಿಧಾನಗಳ ಕಾರಣ ಎರಡು ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬಿಟ್ಟರೆ ಒಟ್ಟು 12 ದಿನಗಳು 24 ಗಂಟೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಸಬೇಕು. ಈ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳಿ ಎಂದು ಸಚಿವರು ಸೂಚನೆ ನೀಡಿದ್ದಾರೆ.

ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ ಹಾಸನ ಎಂದರೆ ಶಿಲ್ಪಕಲೆಗಳ ತವರೂರು. ಪ್ರವಾಸೋದ್ಯಮವಾಗಿ ಬೆಳೆಸುವ ನಿಟ್ಟಿನಲ್ಲಿ ಹೆಚ್ಚು ಪ್ರಚಾರ ಕೊಟ್ಟು ಹಾಸನಾಂಬೆ ಮೂಲಕ ಹೆಚ್ಚು ಪ್ರವಾಸಿಗರನ್ನು ಸೆಳೆಯಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು. ಅಧಿಕಾರಿಗಳು ಮತ್ತು ಹಿರಿಯ ನಾಗರಿಕರೊಂದಿಗೆ ಮತ್ತೊಮ್ಮೆ ಸಭೆ ನಡೆಸಲಾಗುತ್ತದೆ. ನಂತರ ಜಿಲ್ಲಾ ಪ್ರಾಧಿಕಾರವು ಕಾರ್ಯಕ್ರಮಗಳ ವಿವರವಾದ ಪಟ್ಟಿಯನ್ನು ಸಿದ್ಧಪಡಿಸುತ್ತದೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಬಾಮಾ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

SCROLL FOR NEXT