ಶಿವಮೊಗ್ಗದ ಸರ್ಕಾರಿ ಬಾಲ ಮಂದಿರದ ಉತ್ತಮ ಪರೇಡ್ ತಂಡಕ್ಕೆ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಟ್ರೋಫಿ ವಿತರಿಸಿದರು. 
ರಾಜ್ಯ

ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಸಂವಿಧಾನದ ಆಶಯ ಓದಲು ಕ್ರಮ: ಸಚಿವ ಮಧು ಬಂಗಾರಪ್ಪ

ಸಂವಿಧಾನದ ಆಶಯವನ್ನು ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗ: ಸಂವಿಧಾನದ ಆಶಯವನ್ನು ಪ್ರತಿದಿನ ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದರು.

ಮಂಗಳವಾರ ಇಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ, ಸಮವಸ್ತ್ರ, ಶೂ ಸೇರಿದಂತೆ ಸೂಕ್ತ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. 

ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಮೊಟ್ಟೆಗಳನ್ನು ನೀಡಲಾಗುವುದು. ಇದು ಮುಂದಿನ ವಾರದಿಂದ ಪ್ರಾರಂಭವಾಗುತ್ತದೆ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಎರಡು ಪೂರಕ ಪರೀಕ್ಷೆಗಳ ಆಯ್ಕೆಯನ್ನು ನೀಡಲಾಗುವುದು. ಇದು ಒಂದು ವರ್ಷ ವ್ಯರ್ಥವಾಗದೆ ಮುಂದಿನ ಅಧ್ಯಯನಕ್ಕೆ ಸೇರಲು ಸಹಾಯ ಮಾಡುತ್ತದೆ. ಶಿಕ್ಷಕರ ನೇಮಕ ಹಾಗೂ ಹೊಸ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಶರಾವತಿ ಒತ್ತುವರಿ ತೆರವುದಾರರು ಮತ್ತು ಬಗರ್ ಹುಕುಂ ರೈತರಿಗೆ ಸಂಬಂಧಿಸಿದ ಭೂ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಪರಿಹಾರ ಕಂಡುಕೊಳ್ಳಲು ಉತ್ಸುಕರಾಗಿದ್ದಾರೆ. ಅರಣ್ಯ ಮತ್ತು ಕಂದಾಯ ಇಲಾಖೆಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದರು.

ಅತಿವೃಷ್ಟಿಯಿಂದ ಬೆಳೆ ನಷ್ಟ ಹಾಗೂ ಮನೆಗಳಿಗೆ ಹಾನಿಯಾಗಿರುವ ಜನರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಆಯುಷ್ ವಿಶ್ವವಿದ್ಯಾಲಯ ಆರಂಭಿಸಲು ವಿಶೇಷ ಗಮನ ನೀಡಲಾಗುತ್ತಿದೆ. ಗ್ರಾಮೀಣ ಜನರನ್ನು ಮುಖ್ಯವಾಹಿನಿಗೆ ತರಲು ಸಹಾಯ ಮಾಡಲು ಗ್ರಾಮೀಣ ಪ್ರದೇಶಗಳಲ್ಲಿ ಅಸ್ತಿತ್ವದಲ್ಲಿರುವ ಗ್ರಂಥಾಲಯಗಳನ್ನು ಇ-ಲೈಬ್ರರಿಗಳಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT