ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಬಹುತೇಕ ರೋಗಿಗಳ ಆರೋಗ್ಯ ಸ್ಥಿರ, ಇಬ್ಬರ ಸ್ಥಿತಿ ಗಂಭೀರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುತೇಕ ಗಾಯಾಳುಗಳ ಆರೋಗ್ಯ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುತೇಕ ಗಾಯಾಳುಗಳ ಆರೋಗ್ಯ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ನಿರ್ದೇಶಕ ಡಾ. ರಮೇಶ್ ಕೃಷ್ಣ ಕೆ ಅವರು ಮಾತನಾಡಿ, ಎಲ್ಲಾ ರೋಗಿಗಳ ಸ್ಥಿತಿ ಸ್ಥಿರವಾಗಿದೆ. ಆದರೆ, ಕಿರಣ್ (26) ಮತ್ತು ಶಿವಕುಮಾರ್ (45)ಎಂಜಿನಿಯರ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ರಾಸಾಯನಿಕ ಮಿಶ್ರಿತ ಗಾಳಿಯನ್ನು ಉಸಿರಾಡಿರುವುದರಿಂದ ಶ್ವಾಸಕೋಶದಲ್ಲಿ ಉರಿಯೂತ ಉಂಟಾಗಿದೆ. ಶ್ವಾಸಕೋಶದ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಚಿಕಿತ್ಸೆಗಳನ್ನು ಮುಂದುವರೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 11 ರಂದು ಹಡ್ಸನ್ ವೃತ್ತದಲ್ಲಿರುವ ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿರುವ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ತಗುಲಿತ್ತು. ಪರಿಣಾಮ 7 ಮಂದಿ ಗಾಯಗೊಂಡಿದ್ದರು.

ಶಿವಕುಮಾರ್(ಮುಖ್ಯ ಎಂಜಿನಿಯರ್‌). ಕಿರಣ್ ಸಂತೋಷ್ ಕುಮಾರ್ ವಿಜಯಮಾಲ (ಕಾರ್ಯಪಾಲಕ ಎಂಜಿನಿಯರ್‌), ಶ್ರೀಧರ್(ಸಹಾಯಕ ಕಾರ್ಯಪಾಲಕ ಎಂಜಿನಿಯರ್‌), ಸಿರಾಜ್‌ ‍(ಪ್ರಥಮ ದರ್ಜೆ ಸಹಾಯಕ), ಜ್ಯೋತಿ(ಆಪರೇಟರ್), ಶ್ರೀನಿವಾಸ್ (ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್), ಮನೋಜ್‌(ಗಣಕ ಯಂತ್ರ ನಿರ್ವಾಹಕ) ಎಂಬುವವರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?