ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಬಾಡಿಗೆ ಮನೆಯಲ್ಲಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ನಿವೃತ್ತ ಪೊಲೀಸ್ ಅಧಿಕಾರಿ ಬಂಧನ

ತನ್ನ ಬಾಡಿಗೆ ಮನೆಯ ಅಪ್ರಾಪ್ತ ಬಾಲಕಿ ಮೇಲೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಆಗಿ ನಿವೃತ್ತರಾಗಿರುವ 74 ವರ್ಷದ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ತನ್ನ ಬಾಡಿಗೆ ಮನೆಯ ಅಪ್ರಾಪ್ತ ಬಾಲಕಿ ಮೇಲೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ. 

ಬೆಂಗಳೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಆಗಿ ನಿವೃತ್ತರಾಗಿರುವ 74 ವರ್ಷದ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ತಾಯಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ತನ್ನ ಮಗಳು ಕೆಳಗೆ ಬಿದ್ದಿದ್ದ ಆಟಿಕೆ ತರಲು ನೆಲ ಮಹಡಿಗೆ ಹೋಗಿದ್ದಳು. ಅದಾದ ಕೆಲಹೊತ್ತಿನವರೆಗೂ ಆಕೆ ಹಿಂತಿರುಗದ ಕಾರಣ, ತಾನು ಕೂಗಿಕೊಂಡೆ. ಆಗ ತನ್ನ 7 ವರ್ಷದ ಮಗು ದಯನೀಯ ಸ್ಥಿತಿಯಲ್ಲಿ ಮನೆಗೆ ಮರಳಿದಳು.

ಕಣ್ಣೀರು ಹಾಕುತ್ತಿದ್ದ ಸಂತ್ರಸ್ತೆ ತನಗಾದ ಕಷ್ಟವನ್ನು ತನ್ನ ತಾಯಿ ಬಳಿ ಹೇಳಿಕೊಂಡಿದ್ದಾಳೆ. ಇದನ್ನು ಪ್ರಶ್ನಿಸಿದ ಸಂತ್ರಸ್ತೆಯ ತಂದೆಗೆ ಆರೋಪಿಯ ಪುತ್ರ ಬೆದರಿಕೆ ಹಾಕಿದ್ದಾನೆ. ಆತನೂ ಪೊಲೀಸ್ ಅಧಿಕಾರಿ ಎನ್ನಲಾಗಿದೆ.

ನಿವೃತ್ತ ಸಬ್‌ಇನ್ಸ್‌ಪೆಕ್ಟರ್‌ನ ಮಗ, ಈ ಘಟನೆಯನ್ನು ಯಾರಿಗೂ ಬಹಿರಂಗಪಡಿಸದೆ ಹಣ ತೆಗೆದುಕೊಂಡು ಬಾಡಿಗೆ ನಿವಾಸವನ್ನು ಖಾಲಿ ಮಾಡುವಂತೆ ಹೇಳಿದ್ದಾನೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಆರೋಪಿ ಹಾಗೂ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಬಾಲಕಿ ತಂದೆಗೆ ಬೆದರಿಕೆ ಹಾಕಿದ ಮತ್ತು ಅಪರಾಧವನ್ನು ಮರೆಮಾಚಲು ಪ್ರಯತ್ನಿಸಿದ್ದಕ್ಕಾಗಿ ನಿವೃತ್ತ ಸಬ್‌ಇನ್ಸ್‌ಪೆಕ್ಟರ್‌ನ ಮಗನ ಮೇಲೆ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು