ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ ಶೃಂಗಸಭೆ ಉದ್ಘಾಟಿಸಿದ ರಾಜೀವ್ ಚಂದ್ರಶೇಖರ್ 
ರಾಜ್ಯ

2026ರ ವೇಳೆಗೆ ಡಿಜಿಟಲ್ ಆರ್ಥಿಕತೆಯಿಂದ ದೇಶದ GDPಗೆ 20% ಕ್ಕಿಂತ ಹೆಚ್ಚು ಕೊಡುಗೆ: ರಾಜೀವ್ ಚಂದ್ರಶೇಖರ್

2026 ರ ವೇಳೆಗೆ ಡಿಜಿಟಲ್ ಆರ್ಥಿಕತೆಯು ದೇಶದ ಜಿಡಿಪಿಗೆ ಶೇಕಡಾ 20 ಕ್ಕಿಂತ ಹೆಚ್ಚು ಕೊಡುಗೆ ನೀಡಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: 2026 ರ ವೇಳೆಗೆ ಡಿಜಿಟಲ್ ಆರ್ಥಿಕತೆಯು ದೇಶದ ಜಿಡಿಪಿಗೆ ಶೇಕಡಾ 20 ಕ್ಕಿಂತ ಹೆಚ್ಚು ಕೊಡುಗೆ ನೀಡಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಗುರುವಾರ ಹೇಳಿದ್ದಾರೆ.

ಇಂದು ನಗರದಲ್ಲಿ 'ಜಿ20 ಡಿಜಿಟಲ್ ಇನ್ನೋವೇಶನ್ ಅಲೈಯನ್ಸ್ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತವು ತಂತ್ರಜ್ಞಾನವನ್ನು ಅತ್ಯಂತ ವೇಗವಾಗಿ ಅಳವಡಿಸಿಕೊಂಡ ಪ್ರಮುಖ ರಾಷ್ಟ್ರವಾಗಿದೆ ಎಂದಿದ್ದಾರೆ.

2014 ರಲ್ಲಿ ಒಟ್ಟು GDPಯ ಶೇಕಡಾ 5 ರಷ್ಟು ಕೊಡುಗೆ ನೀಡಿದ್ದು, ಡಿಜಿಟಲ್ ಆರ್ಥಿಕತೆ ಪ್ರಸ್ತುತ ಶೇ. 11 ರಷ್ಟು ಕೊಡುಗೆ ನೀಡುತ್ತಿದ್ದು, 2026 ರ ವೇಳೆಗೆ ಶೇಕಡಾ 20 ರಷ್ಟು ಕೊಡುಗೆ ನೀಡಲಿದೆ ಎಂಬ ನಿರೀಕ್ಷೆ ಇದೆ" ಎಂದು ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರು ಸ್ಟಾರ್ಟಪ್ ಹಾಗೂ ಹೊಸ ಇನ್ನೊವೇಷನ್‌ಗೆ ಎಪಿಕ್ ಸೆಂಟರ್ ಆಗಿದೆ. ಭಾರತ ಹೊಸ ಡಿಜಿಟಲ್ ಇನ್ನೋವೇಷನ್‌ನಲ್ಲಿ ಮುಂಚೂಣಿಯಲ್ಲಿದೆ. ದೇಶದ ಪ್ರತಿಯೊಬ್ಬರು ಡಿಜಿಟಲ್ ಅವಕಾಶಗಳನ್ನ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಡಿಜಿಟಲ್ ಭವಿಷ್ಯದ ಕುರಿತು 2021ರಲ್ಲಿಯೇ ಹೇಳಿದ್ದರು. ಈ ದಶಕವನ್ನು ಟೆಕೇಡ್‌ ಅಂತ ಕರೆದಿದ್ದಾರೆ. ಅಂದರೆ ಭಾರತದಲ್ಲಿ ಡಿಜಿಟಲ್ ಭವಿಷ್ಯದ ಕುರಿತು ಆಗುವ ಬೆಳವಣಿಗೆ ಕಾರಣಕ್ಕಾಗಿ ಪ್ರಧಾನಿಗಳು ಟೆಕೇಡ್ ಅಂತ ಕರೆದಿದ್ದರು. ಭಾರತದ ಆಡಳಿತವನ್ನೇ ಒಂದು ಕೇಸ್ ಸ್ಟಡಿಯಾಗಿ ನೋಡಬಹುದು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದಲ್ಲಿ ಆಗಿರುವ ಡಿಜಿಟಲ್ ಕ್ರಾಂತಿ ಕುರಿತು ಕೇಸ್ ಸ್ಟಡಿ ಮಾಡಬಹುದು ಎಂದೂ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT