ಸಚಿವ ಮುನಿಯಪ್ಪ 
ರಾಜ್ಯ

ಆಂಧ್ರ ಪ್ರದೇಶ, ತೆಲಂಗಾಣದಿಂದ ಅಕ್ಕಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ: ಸಚಿವ ಮುನಿಯಪ್ಪ

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಆಂಧ್ರ ಪ್ರದೇಶ ಮತ್ತು ತೆಲಂಗಾಣದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಬುಧವಾರ ಹೇಳಿದರು.

ಬೆಂಗಳೂರು: ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಆಂಧ್ರ ಪ್ರದೇಶ ಮತ್ತು ತೆಲಂಗಾಣದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ವೆಚ್ಚ ಹೊರತುಪಡಿಸಿ ಕೆಜಿಗೆ ರೂ.40ಕ್ಕೆ ಅಕ್ಕಿ ಪೂರೈಕೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಇದೀಗ ಆ ಅಕ್ಕಿಯನ್ನು ಖರೀದಿ ಮಾಡುವುದು, ಬಿಡುವ ಕುರಿತು ರಾಜ್ಯ ಸರ್ಕಾರ ಇನ್ನೂ ನಿರ್ಧರಿಸಿಲ್ಲ. ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯಗಳ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಭಾರತೀಯ ಆಹಾರ ನಿಗಮದಿಂದ (ಎಫ್‌ಸಿಐ) ಕೆಜಿಗೆ 34 ರೂ.ಗೆ ಅಕ್ಕಿಯನ್ನು ಖರೀದಿ ಮಾಡಿದರೆ, ಅದು ರಾಜ್ಯ ಸರ್ಕಾರಕ್ಕೆ ಸಹಾಯವಾಗಲಿದೆ. ಆದರೆ, ಎಫ್‌ಸಿಐ ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳು ಕೆಜಿಗೆ 40 ರೂ.ಗೆ ಅಕ್ಕಿ ಮಾರಾಟ ಮಾಡಲು ಸಿದ್ಧವಾಗಿವೆ.

ಬೆಲೆ ಕಡಿಮೆ ಮಾಡುವಂತೆ ಎರಡೂ ರಾಜ್ಯಗಳಿಗೂ ಮನವಿ ಮಾಡಿಕೊಳ್ಳಲಾಗಿದೆ. ಈ ಕುರಿತು ಚಿಂತನೆ ನಡೆಸಿ, ನಿರ್ಧಾರ ಕೈಗೊಳ್ಳಲು 1 ವಾರ ಕಾಲಾವಕಾಶ ಕೇಳಿದ್ದಾರೆ. ಅಂತಿಮ ಬೆಲೆ ಬಗ್ಗೆ ಮಾಹಿತಿ ನೀಡಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ನಂತರ, ಈ ರಾಜ್ಯಗಳೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುವುದಕ್ಕೂ ಮುನ್ನ ಸಿಎಂ ಜೊತೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಅಕ್ಕಿಯನ್ನು ಪೂರೈಸಲು ರಾಜ್ಯ ಸರ್ಕಾರ ಬದ್ಧವಾಗಿದೆ, ಅಗತ್ಯವಿರುವ ಪ್ರಮಾಣದ ಅಕ್ಕಿ ಖರೀದಿಯನ್ನು ರಾಜ್ಯವು ಅಂತಿಮಗೊಳಿಸುವವರೆಗೆ ಡಿಬಿಟಿ ಮುಂದುವರಿಯುತ್ತದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ನೀಡಬೇಕಾಗಿದ್ದ ಆಗಸ್ಟ್‌ ತಿಂಗಳ ಹಣವನ್ನು ಒಂದು ವಾರದಲ್ಲಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಖಾತೆಗೆ ಹಾಕಲಾಗುವುದು. ಪ್ರತಿ ತಿಂಗಳು 10 ಅಥವಾ 11ರ ವೇಳೆಗೆ ಅಕ್ಕಿ ನೀಡುತ್ತಿದ್ದೆವು. ಆದರೆ ಡಿಬಿಟಿ ವ್ಯವಸ್ಥೆಯಲ್ಲಿನ ಕೆಲ ಸಮಸ್ಯೆಯಿಂದ ಹಣ ವರ್ಗಾವಣೆ ತಡವಾಗಿದೆ. ಒಂದು ವರ್ಷದಿಂದ ಬಾಕಿ ಉಳಿದಿರುವ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT