ಸಚಿವ ಮುನಿಯಪ್ಪ 
ರಾಜ್ಯ

ಆಂಧ್ರ ಪ್ರದೇಶ, ತೆಲಂಗಾಣದಿಂದ ಅಕ್ಕಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ: ಸಚಿವ ಮುನಿಯಪ್ಪ

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಆಂಧ್ರ ಪ್ರದೇಶ ಮತ್ತು ತೆಲಂಗಾಣದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಬುಧವಾರ ಹೇಳಿದರು.

ಬೆಂಗಳೂರು: ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಆಂಧ್ರ ಪ್ರದೇಶ ಮತ್ತು ತೆಲಂಗಾಣದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ವೆಚ್ಚ ಹೊರತುಪಡಿಸಿ ಕೆಜಿಗೆ ರೂ.40ಕ್ಕೆ ಅಕ್ಕಿ ಪೂರೈಕೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಇದೀಗ ಆ ಅಕ್ಕಿಯನ್ನು ಖರೀದಿ ಮಾಡುವುದು, ಬಿಡುವ ಕುರಿತು ರಾಜ್ಯ ಸರ್ಕಾರ ಇನ್ನೂ ನಿರ್ಧರಿಸಿಲ್ಲ. ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯಗಳ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಭಾರತೀಯ ಆಹಾರ ನಿಗಮದಿಂದ (ಎಫ್‌ಸಿಐ) ಕೆಜಿಗೆ 34 ರೂ.ಗೆ ಅಕ್ಕಿಯನ್ನು ಖರೀದಿ ಮಾಡಿದರೆ, ಅದು ರಾಜ್ಯ ಸರ್ಕಾರಕ್ಕೆ ಸಹಾಯವಾಗಲಿದೆ. ಆದರೆ, ಎಫ್‌ಸಿಐ ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳು ಕೆಜಿಗೆ 40 ರೂ.ಗೆ ಅಕ್ಕಿ ಮಾರಾಟ ಮಾಡಲು ಸಿದ್ಧವಾಗಿವೆ.

ಬೆಲೆ ಕಡಿಮೆ ಮಾಡುವಂತೆ ಎರಡೂ ರಾಜ್ಯಗಳಿಗೂ ಮನವಿ ಮಾಡಿಕೊಳ್ಳಲಾಗಿದೆ. ಈ ಕುರಿತು ಚಿಂತನೆ ನಡೆಸಿ, ನಿರ್ಧಾರ ಕೈಗೊಳ್ಳಲು 1 ವಾರ ಕಾಲಾವಕಾಶ ಕೇಳಿದ್ದಾರೆ. ಅಂತಿಮ ಬೆಲೆ ಬಗ್ಗೆ ಮಾಹಿತಿ ನೀಡಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ನಂತರ, ಈ ರಾಜ್ಯಗಳೊಂದಿಗೆ ಒಪ್ಪಂದವನ್ನು ಅಂತಿಮಗೊಳಿಸುವುದಕ್ಕೂ ಮುನ್ನ ಸಿಎಂ ಜೊತೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಅಕ್ಕಿಯನ್ನು ಪೂರೈಸಲು ರಾಜ್ಯ ಸರ್ಕಾರ ಬದ್ಧವಾಗಿದೆ, ಅಗತ್ಯವಿರುವ ಪ್ರಮಾಣದ ಅಕ್ಕಿ ಖರೀದಿಯನ್ನು ರಾಜ್ಯವು ಅಂತಿಮಗೊಳಿಸುವವರೆಗೆ ಡಿಬಿಟಿ ಮುಂದುವರಿಯುತ್ತದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ನೀಡಬೇಕಾಗಿದ್ದ ಆಗಸ್ಟ್‌ ತಿಂಗಳ ಹಣವನ್ನು ಒಂದು ವಾರದಲ್ಲಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಖಾತೆಗೆ ಹಾಕಲಾಗುವುದು. ಪ್ರತಿ ತಿಂಗಳು 10 ಅಥವಾ 11ರ ವೇಳೆಗೆ ಅಕ್ಕಿ ನೀಡುತ್ತಿದ್ದೆವು. ಆದರೆ ಡಿಬಿಟಿ ವ್ಯವಸ್ಥೆಯಲ್ಲಿನ ಕೆಲ ಸಮಸ್ಯೆಯಿಂದ ಹಣ ವರ್ಗಾವಣೆ ತಡವಾಗಿದೆ. ಒಂದು ವರ್ಷದಿಂದ ಬಾಕಿ ಉಳಿದಿರುವ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT