ಗೋಲ್ಡನ್‌ ಸ್ಟಾರ್‌ ಗಣೇಶ್‌ 
ರಾಜ್ಯ

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ: ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ನೋಟಿಸ್, ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ನಟ ಗಣೇಶ್ ಅವರು ಗುಂಡ್ಲುಪೇಟೆ ತಾಲ್ಲೂಕು ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ 1 ಎಕರೆ 24 ಗುಂಟೆ ಜಮೀನು ಹೊಂದಿದ್ದು, ಮನೆ ಹಾಗೂ ತೋಟಗಾರಿಕೆ ಉದ್ದೇಶಕ್ಕಾಗಿ ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೆ. 

ಆದರೆ ಅರಣ್ಯ ಸೂಕ್ಷ್ಮ ಪರಿಸರ ವಲಯದಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಪರಿಸರ ವಾದಿಗಳು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಂಡಿಪುರ ಹುಲಿಧಾಮ ನಿರ್ದೇಶಕ ಡಾ.ಪಿ.ರಮೇಶ್‌ ಕುಮಾರ್‌ ಅವರು ಗಣೇಶ್ ಅವರಿಗೆ ನೊಟೀಸ್‌ ಜಾರಿಗೊಳಿಸಿದ್ದಾರೆ.

ಕಟ್ಟಡ ನಿರ್ಮಿಸುತ್ತಿರುವ ಸ್ಥಳ ಸೂಕ್ಷ್ಮ ಪರಿಸರ ವಲಯದಲ್ಲಿದೆ. ಇಲ್ಲಿ ಕಟ್ಟಡ ನಿರ್ಮಿಸಲು ಯಾವ ಅನುಮತಿ ಪಡೆದಿದ್ದೀರಿ, ಯಾವ ಉದ್ದೇಶಕ್ಕೆ ಕಟ್ಟಡ ನಿರ್ಮಾಣವಾಗುತ್ತಿದೆ ಎನ್ನುವ ವಿವರಣೆಯನ್ನು ನೀಡುವಂತೆಯೂ ಗಣೇಶ್ ಅವರಿಗೆ ಸೂಚಿಸಲಾಗಿದೆ.

ನಟ ಗಣೇಶ್ ಅವರು 2023ರ ಮಾರ್ಚ್ 15ರಂದು ವಾಸ ಹಾಗೂ ಕೃಷಿ ಉಪಕರಣಗಳನ್ನು ಇರಿಸಲು ಮನೆ ನಿರ್ಮಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು. ಜಮೀನಿನಲ್ಲಿ ಸ್ವಂತ ಉಪಯೋಗಕ್ಕೆ ತಾತ್ಕಾಲಿಕ ಮನೆ ನಿರ್ಮಿಸಲು ಬಂಡೀಪುರ ನಿರ್ದೇಶಕರು ಅನುಮತಿ ನೀಡಿದ್ದಾರೆ. ಅನುಮತಿಗಿಂತ ಹೆಚ್ಚು ಜಾಗದಲ್ಲಿ ಮನೆ ನಿರ್ಮಿಸುವಂತಿಲ್ಲ. ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ಷರತ್ತನ್ನೂ ಹಾಕಿದ್ದರು. ಆದರೆ ಸ್ಥಳದಲ್ಲಿ ದೊಡ್ಡ ಕಾಂಕ್ರೀಟ್ ಪಿಲ್ಲರ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಮೇಲ್ನೋಟಕ್ಕೆ ಬೃಹತ್ ಶಾಶ್ವತ ಕಟ್ಟಡ ನಿರ್ಮಿಸುವಂತೆ ಕಾಣಿಸುತ್ತಿದೆ. ಹೀಗಾಗಿ ಪರಿಸರವಾದಿಗಳು, ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT