ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಜಾನುವಾರುಗಳನ್ನು ಅಮಾನವೀಯವಾಗಿ ಸಾಗಿಸುತ್ತಿದ್ದ ನಾಲ್ವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತರನ್ನು ಸಾಲೆತ್ತೂರಿನ ಹಮೀದ್, ಇಬ್ರಾಹಿಂ, ಮಂಜೇಶ್ವರದ ಮೂಸಾ ಮತ್ತು ಬಂಟ್ವಾಳದ ಹಮೀದ್ ಅಲಿಯಾಸ್ ಜಲಾಲ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಕೇರಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ನಾಲ್ವರ ವಿರುದ್ಧ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1960 ಮತ್ತು ಕರ್ನಾಟಕ ಜಾನುವಾರು ಹತ್ಯೆ ತಡೆ ಕಾಯ್ದೆ 2020ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಮಧ್ಯೆ, ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರ ತಂಡ ತಮ್ಮ ಮೇಲೆ ಬೇಸ್‌ಬಾಲ್ ಬ್ಯಾಟ್ ಮತ್ತು ಚಾಕುವಿನಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬಂಧಿತ ಆರೋಪಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಜಾನುವಾರು ಸಾಗಾಟ ಪ್ರಕರಣದ ಆರೋಪಿ ಮೂಸಾ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT