ಸಿಎಂ ಸಿದ್ದರಾಮಯ್ಯ 
ರಾಜ್ಯ

ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ; ರಾಜ್ಯದ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ: ಸಿಎಂ ಸಿದ್ದರಾಮಯ್ಯ

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ.

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.  

ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT