ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ಕಂಪನಿಯ ಬಸ್ ಹರಿದು ವೃದ್ಧ ಸಾವು

ಖಾಸಗಿ ಕಂಪನಿಯೊಂದರ ಬಸ್ ಹರಿದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.  79 ವರ್ಷದ ವೃದ್ಧರೊಬ್ಬರ ಬೈಸಿಕಲ್ ಗೆ ಬಸ್ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಮೇಲೆ ಬಿದ್ದ ಅವರ ಬಸ್ ಹರಿದಿದೆ.

ಬೆಂಗಳೂರು: ಖಾಸಗಿ ಕಂಪನಿಯೊಂದರ ಬಸ್ ಹರಿದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. 79 ವರ್ಷದ ವೃದ್ಧರೊಬ್ಬರ ಬೈಸಿಕಲ್ ಗೆ ಬಸ್ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಮೇಲೆ ಬಿದ್ದ ಅವರ ಬಸ್ ಹರಿದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಗುರುವಾರ ಮಧ್ಯಾಹ್ನ 12:45 ರ ಸುಮಾರಿಗೆ ಡಾ ಪುನೀತ್ ರಾಜ್‌ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್‌ಮೆಂಟ್ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ಕೃಷ್ಣಾ ರೆಡ್ಡಿ ಎಂದು ಗುರುತಿಸಲಾಗಿದ್ದು, ಕದಿರೇನಹಳ್ಳಿ ನಿವಾಸಿ ಎನ್ನಲಾಗಿದೆ.

ಕತ್ರಿಗುಪ್ಪೆಯಲ್ಲಿರುವ ತನ್ನ ಸ್ನೇಹಿತರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಸಂಬಂಧ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT