ಸಂಗ್ರಹ ಚಿತ್ರ 
ರಾಜ್ಯ

ಕ್ಯಾಸಿನೋದಲ್ಲಿ 25 ಲಕ್ಷ ರೂ. ಗೆದಿದ್ದ ಟೀ ವ್ಯಾಪಾರಿ ಅಪಹರಿಸಿ, 15 ಲಕ್ಷ ರೂ. ಸುಲಿಗೆ: ರೌಡಿ ಸೇರಿ 8 ಮಂದಿ ಬಂಧನ

ಗೋವಾದ ಕ್ಯಾಸಿನೊದಲ್ಲಿ 25 ಲಕ್ಷ ಹಣ ಗೆದ್ದಿದ್ದ ಟೀ ವ್ಯಾಪಾರಿ ವ್ಯಾಪಾರಿಯ ಅಪಹರಿಸಿ, 15 ಲಕ್ಷ ರೂಗಳನ್ನು ಸುಲಿಗೆ ಮಾಡಿದ್ದ ಎಂಟು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಗೋವಾದ ಕ್ಯಾಸಿನೊದಲ್ಲಿ 25 ಲಕ್ಷ ಹಣ ಗೆದ್ದಿದ್ದ ಟೀ ವ್ಯಾಪಾರಿ ವ್ಯಾಪಾರಿಯ ಅಪಹರಿಸಿ, 15 ಲಕ್ಷ ರೂಗಳನ್ನು ಸುಲಿಗೆ ಮಾಡಿದ್ದ ಎಂಟು ಆರೋಪಿಗಳನ್ನು ಹನುಮಂತನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ಹೋಗಿದ್ದ ಟೀ ಮಾರಾಟಗಾರ ಟಿ.ಎಂ.ತಿಲಕ್ ಮಣಿಕಂಠ ಅವರು, ಅಲ್ಲಿನ ಕ್ಯಾಸಿನೋದಲ್ಲಿ ರೂ.25 ಲಕ್ಷ ಗೆದ್ದಿದ್ದರು. ಬಳಿಕ ನಗರಕ್ಕೆ ವಾಪಸ್ಸಾಗಿ ವಾಟ್ಸಾಪ್ ಸ್ಟೇಟಸ್ ನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದರು.

ಈ ಮಾಹಿತಿ ತಿಳಿದ ಆರೋಪಿಗಳು ಮಣಿಕಂಠ ಅವರನ್ನು ಆ.5 ರಂದು ಅಪಹರಿಸಿ ಚಿತ್ರಹಿಂಸೆ ನೀಡಿ, ಸುಲಿಗೆ ಮಾಡಿದ್ದರು. ನಂತರ ನೆಲಮಂಗಲದ ರೆಸಾರ್ಟ್‌ನಲ್ಲಿ ಬಿಟ್ಟು ಪರಾರಿಯಾಗಿದ್ದರು. ಮರುದಿನ ಮಣಿಕಂಠ ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಘಟನೆ ಬಳಿಕ ತಮಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆಂಬ ವಿಚಾರ ತಿಳಿದ ಆರೋಪಿಗಳು, ನಗರದಿಂದ ಕಾಲ್ಕಿತ್ತಿದ್ದರು. ಗೋವಾಗೆ ತೆರಳಿ ಮುಂಬೈ ಮೂಲಕ ಶಿರಡಿಗೆ ತೆರಳಿದ್ದರು. ಈ ವಿಚಾರ ತಿಳಿದ ಪೊಲೀಸರು, ತಂಡ ರಚಿಸಿ ಆರೋಪಿಗಳನ್ನು ಶಿರಡಿಯಲ್ಲಿ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ರೌಡಿ ಕಾರ್ತಿಕ್, ರಾಹುಲ್, ತರುಣ್, ಮನೋಜ್, ಈಶ್ವರ್, ರಾಮಕುಮಾರ್ ಅಲಿಯಾಸ್ ದೀಪು, ಮೋಹನ್ ಹಾಗೂ ನಿಶ್ಚಲ್ ಎಂದು ಗುರ್ತಿಸಲಾಗಿದ್ದು, ಆರೋಪಿಗಳಿಂದ ರೂ.10 ಲಕ್ಷವನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ 8 ಮಂದಿಯ ಪೈಕಿ ಕಾರ್ತಿ ಹಾಗೂ ರಾಹುಲ್ ಬನಶಂಕರಿ ಪೊಲೀಸ್ ಠಾಣೆ ಮತ್ತು ವಿವಿ ಪುರಂ ಪೊಲೀಸ್ ಠಾಣೆಗಳಲ್ಲಿ ರೌಡಿ ಶೀಟರ್‌ಗಳಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT