ತೀಸ್ತಾ ಸೆಟಲ್ವಾಡ್ 
ರಾಜ್ಯ

ತೀಸ್ತಾ ಸೆಟಲ್ವಾಡ್ ಐಐಎಸ್ ಸಿ ಪ್ರವೇಶಕ್ಕೆ ತಡೆ: ಕಾಂಗ್ರೆಸ್ ನಾಯಕರ ಆಕ್ರೋಶ

ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್ ನಂತಹ ಪ್ರತಿಷ್ಠಿತ ಸಂಸ್ಥೆಯ ಪ್ರವೇಶ ನಿರಾಕರಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು: ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್ ನಂತಹ ಪ್ರತಿಷ್ಠಿತ ಸಂಸ್ಥೆಯ ಪ್ರವೇಶ ನಿರಾಕರಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ತೀಸ್ತಾ ಸೆಟಲ್ವಾಡ್ ಅವರನ್ನು ನಡೆಸಿಕೊಂಡ ರೀತಿ ನನಗೆ ಆಘಾತ ತರಿಸಿದೆ, ಆಕ ಸಂವಿಧಾನದ ವಿರುದ್ಧವಾಗಿ ಏನಾದರೂ ಮಾತನಾಡಿದ್ದರೇ ನಾನೇ ಮೊದಲು ತಡೆಯುತ್ತಿದ್ದೆ, ಆದರೆ ಅವರು ಕೋಮು ಸೌಹಾರ್ದತೆ ಬಗ್ಗೆ ಮಾತನಾಡಲು ಬಂದಿದ್ದರು.

 ವಿವಿಧ ಧರ್ಮಗಳ ನಡುವೆ ಸಹೋದರತ್ವವನ್ನು ಬೆಳೆಸುವ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡುವುದನ್ನು IISc ಯಂತಹ ಪ್ರಧಾನ ಸಂಸ್ಥೆ ಹೇಗೆ ತಡೆಯುತ್ತದೆ? ಎಂದು ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಆಡಳಿತ ಮಂಡಳಿಯ ಈ ರೀತಿ ನಡವಳಿಕೆ ಸ್ವೀಕಾರವಲ್ಲ ಎಂದು ಸಚಿವ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೀಸ್ತಾ ಸೆಟಲ್ವಾಡ್ ಪದ್ಮಶ್ರೀ ಪುರಸ್ಕೃತರು. ಕೇಂದ್ರವು ಆಕೆಯನ್ನು ಬೇಟೆಯಾಡುತ್ತಿದ್ದರೂ, ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿಲ್ಲ. ಅವರು ಕೋಮು ಸೌಹಾರ್ದತೆಯ ಬಗ್ಗೆ ಮಾತನಾಡುತ್ತಿದ್ದಾರೆ, ಇದು ಸಮಯದ ಅಗತ್ಯವಾಗಿದೆ.  ಅವರನ್ನು ತಡೆದದ್ದು ಸಮಂಜಸವಲ್ಲ ಎಂದು ಕೆಪಿಸಿಸಿ ಮುಖಂಡ ಸಲೀಂ ಅಹ್ಮದ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT