ಸಂಗ್ರಹ ಚಿತ್ರ 
ರಾಜ್ಯ

ಶಕ್ತಿ ಯೋಜನೆ ಎಫೆಕ್ಟ್: ಅಂತರಾಜ್ಯ ಬಸ್ ಗಳ ಸಂಖ್ಯೆಯಲ್ಲಿ ಕಡಿತ, ಪ್ರಯಾಣಿಕರ ಪರದಾಟ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮಹಿಳೆಯರಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗಿವೆ. ಆದರೆ, ಯೋಜನೆಯು ಅಂತರ್ ರಾಜ್ಯ ಕೆಎಸ್‌ಆರ್‌ಟಿಸಿ ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂದು ತಿಳಿದುಬಂದಿದೆ.

ಮೈಸೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮಹಿಳೆಯರಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗಿವೆ. ಆದರೆ, ಯೋಜನೆಯು ಅಂತರ್ ರಾಜ್ಯ ಕೆಎಸ್‌ಆರ್‌ಟಿಸಿ ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂದು ತಿಳಿದುಬಂದಿದೆ.

ಯೋಜನೆ ಜಾರಿಯಾದ ಬಳಿಕ ಅಂತರ್ ರಾಜ್ಯ ಬಸ್ ಗಳ ಸೇವೆಯನ್ನು ಕಡಿತಗೊಳಿಸಲಾಗುತ್ತಿದ್ದು, ಇದು ಪ್ರವಾಸಿಗರು ಹಾಗೂ ಇತರೆ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟು ಮಾಡುತ್ತಿದೆ.

ಗುಂಡ್ಲುಪೇಟೆಯಿಂದ ನೆರೆಯ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಅಂತರರಾಜ್ಯ ಬಸ್ ಸೇವೆಗಳ ಮೇಲೆ ಪರಿಣಾಮ ಬೀರಿದ್ದು, ಈ ರಾಜ್ಯಗಳಿಗೆ ತೆರಳುತ್ತಿದ್ದ ಬಸ್ ಗಳ ಸಂಖ್ಯೆ 11ರಿಂದ 1ಕ್ಕೆ ಇಳಿಕೆಯಾಗಿದೆ.

ಗುಂಡ್ಲುಪೇಟೆ-ಕೋಯಿಕ್ಕೋಡ್ ನಡುವೆ ಸಂಚರಿಸುವ ಎರಡು ಬಸ್‌ಗಳು, ಗುಂಡ್ಲುಪೇಟೆ-ಊಟಿಗೆ ಎರಡು ಬಸ್‌ ಮತ್ತು ಗುಂಡ್ಲುಪೇಟೆ-ಕೊಯಮತ್ತೂರಿಗೆ ತೆರಳುತ್ತಿದ್ದ ಮೂರು ಬಸ್‌ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡಿನ ಗುಂಡ್ಲುಪೇಟೆ-ಕಲ್ಪೆಟ್ಟಾ ನಡುವೆ ಸಂಚರಿಸುತ್ತಿದ್ದ ಎರಡು ಬಸ್ ಗಳ ಪೈಕಿ, ಒಂದು ಬಸ್ಸಿನ ಸಂಚಾರವನ್ನು ಯೋಜನೆ ಬಳಿಕ ಸ್ಥಗಿತಗೊಳಿಸಲಾಗಿದೆ.

ಬಸ್ ಗಳ ಸಂಖ್ಯೆ ಕಡಿತಗೊಂಡಿರುವ ಪರಿಣಾಮ ಖಾಸಗಿ ಬಸ್, ಕಾರು ಮತ್ತು ಟ್ರಕ್ ಗಳ ಮೇಲೆ ಜನರು ಅವಲಂಬಿತರಾಗುವಂತೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT