ಉಮಾಶ್ರೀ-ಸೀತಾರಾಮ್-ಸುಧಾಮ್ ದಾಸ್ 
ರಾಜ್ಯ

ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್‌ ದಾಸ್‌ ಹೆಸರಿಗೆ ರಾಜ್ಯಪಾಲರ ಅನುಮೋದನೆ!

ದಲಿತ ಸಚಿವರ ತೀವ್ರ ವಿರೋಧದ ನಡುವೆಯೂ ವಿಧಾನಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅನುಮೋದನೆ ನೀಡಿದ್ದಾರೆ. 

ಬೆಂಗಳೂರು: ದಲಿತ ಸಚಿವರ ತೀವ್ರ ವಿರೋಧದ ನಡುವೆಯೂ ವಿಧಾನಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅನುಮೋದನೆ ನೀಡಿದ್ದಾರೆ. 

ಉಮಾಶ್ರೀ ಹೊರತುಪಡಿಸಿ ಸೀತಾರಾಂ, ಸುಧಾಮ್‌ ದಾಸ್‌ ಅವರ ನಾಮನಿರ್ದೇಶನಕ್ಕೆ ದಲಿತ ಸಚಿವರು ಹಾಗೂ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೆ ಕಾಂಗ್ರೆಸ್ ಹೈಕಮಾಂಡ್ ಗೂ ಪತ್ರ ಬರೆದಿತ್ತು. ಇದೀಗ ದಲಿತ ಸಚಿವರು, ನಾಯಕರಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಸೀತಾರಾಂ ಮತ್ತು ಸುಧಾಮ್ ದಾಸ್ ಬದಲಿಗೆ ಬೇರೆ ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ದಲಿತ ಸಚಿವರು ಒತ್ತಾಯಿಸಿದ್ದರು. ಇಷ್ಟೇ ಅಲ್ಲದೆ, ಇವರಿಬ್ಬರ ವಿರುದ್ಧ ರಾಜ್ಯಪಾಲರಿಗೂ ದೂರು ನೀಡಿದ್ದರು. ಇವೆಲ್ಲವನ್ನೂ ಮೀರಿ ಪರಿಷತ್ ಸ್ಥಾನ ಪಡೆಯುವಲ್ಲಿ ಇಬ್ಬರೂ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT