ಸಂಗ್ರಹ ಚಿತ್ರ 
ರಾಜ್ಯ

ಬೇಕರಿಗೆ ನುಗ್ಗಿ ದುಷ್ಕರ್ಮಿಗಳ ದಾಂಧಲೆ: ತಂಡ ರಚಿಸಿ ಪುಂಡರ ಪತ್ತೆಗಿಳಿದ ಪೊಲೀಸರು!

ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.

ಬೆಂಗಳೂರು: ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.

ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬೇಕರಿ ಶ್ರೀ ಮಂಜುನಾಥ ಕೇಕ್ ಕಾರ್ನರ್ & ಸ್ವೀಟ್ಸ್ ಮೇಲೆ ನಾಲ್ವರು ದುಷ್ಕರ್ಮಿಗಳ ತಂಡ ದಾಳಿ ನಡೆದಿದೆ.

ಈ ವೇಳೆ ಕಲ್ಲು, ದೊಣ್ಣೆಗಳಿಂದ ಬೇಕರಿಯ ಶೋಕೇಸ್ ಒಡೆದು ಹಾಕಿದ್ದಾರೆ. ಆಹಾರ ಪದಾರ್ಥಗಳನ್ನು ನಾಶಪಡಿಸಿದ್ದಾರೆ. ಈ ವೇಳೆ ಬೇಕರಿ ಮಾಲೀಕ ಚಂದ್ರಶೇಖರ್ ಅವರು ತಡೆಯಲು ಯತ್ನ ನಡೆಸಿದ್ದರೂ, ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ದುಷ್ಕರ್ಮಿಗಳ ದಾಳಿಯಿಂದಾಗಿ ರೂ.30,000ರಿಂದ 35,000 ನಷ್ಟವಾಗಿದ್ದು, ಈ ಸಂಬಂಧ ಮಾಲೀಕ ಚಂದ್ರಶೇಖರ್ ಅವರು ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಬಳಿಕ ಆರೋಪಿಗಳು ತರೆಮರೆಸಿಕೊಂಡಿದ್ದು, ಇವರ ಪತ್ತೆಗಾಗಿ ತಂಡ ರಚಿಸಿರುವ ಪೊಲೀಸರು, ಹುಡುಕಾಟ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT