ಆನೆ ದಾಳಿ 
ರಾಜ್ಯ

ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ದೇವಾಲಯಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿಯಿಂದ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಅಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಅರಣ್ಯದಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರು ಮೂಲದ ಗೋವಿಂದರಾಜು ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈತನ ಗೆಳೆಯ ಲೋಕೇಶ್ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ (ಆಗಸ್ಟ್‌ 19) ಮಹದೇಶ್ವರ ಬೆಟ್ಟಕ್ಕೆ ಬಂದು ಮಹದೇಶ್ವರ ಸನ್ನಿಧಿಯಲ್ಲಿ ಪೂಜೆ ಮುಗಿಸಿ ನಾಗಮಲೆಗೆ ರಾತ್ರಿ ವೇಳೆ ತೆರಳುತ್ತಿದ್ದ ವೇಳೆ ಈ ಘಟನೆ ನಡಿದಿದೆ ಎಂದು ತಿಳಿದುಬಂದಿದೆ. 

ಇಂಡಿಗನತ್ತ ಹತ್ತಿರವಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಆನೆ ದಾಳಿ ಮಾಡಿದ್ದು, ಈ ವೇಳೆ ಗೋವಿಂದರಾಜು ಆನೆ ತುಳಿಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಲೋಕೇಶ್ ಅಲ್ಲಿಂದ ಪರಾರಿಯಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇನ್ನು ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರಾತ್ರಿ ವೇಳೆ ನಾಗಮಲೆಗೆ ತೆರಳಿದ್ದು ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT