ಆನೆ ದಾಳಿ 
ರಾಜ್ಯ

ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ದೇವಾಲಯಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿಯಿಂದ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಅಪಾಯದಿಂದ ಪಾರಾಗಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಅರಣ್ಯದಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ ಬೆಂಗಳೂರು ಮೂಲದ ಗೋವಿಂದರಾಜು ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈತನ ಗೆಳೆಯ ಲೋಕೇಶ್ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ (ಆಗಸ್ಟ್‌ 19) ಮಹದೇಶ್ವರ ಬೆಟ್ಟಕ್ಕೆ ಬಂದು ಮಹದೇಶ್ವರ ಸನ್ನಿಧಿಯಲ್ಲಿ ಪೂಜೆ ಮುಗಿಸಿ ನಾಗಮಲೆಗೆ ರಾತ್ರಿ ವೇಳೆ ತೆರಳುತ್ತಿದ್ದ ವೇಳೆ ಈ ಘಟನೆ ನಡಿದಿದೆ ಎಂದು ತಿಳಿದುಬಂದಿದೆ. 

ಇಂಡಿಗನತ್ತ ಹತ್ತಿರವಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಆನೆ ದಾಳಿ ಮಾಡಿದ್ದು, ಈ ವೇಳೆ ಗೋವಿಂದರಾಜು ಆನೆ ತುಳಿಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಲೋಕೇಶ್ ಅಲ್ಲಿಂದ ಪರಾರಿಯಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇನ್ನು ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ರಾತ್ರಿ ವೇಳೆ ನಾಗಮಲೆಗೆ ತೆರಳಿದ್ದು ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT