ಕಾಗೋಡು ತಿಮ್ಮಪ್ಪಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ 
ರಾಜ್ಯ

ಕಾಗೋಡು ತಿಮ್ಮಪ್ಪಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಭಾನುವಾರ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಭಾನುವಾರ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ. ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT