ಕಾಗೋಡು ತಿಮ್ಮಪ್ಪಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ 
ರಾಜ್ಯ

ಕಾಗೋಡು ತಿಮ್ಮಪ್ಪಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಭಾನುವಾರ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ  ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಭಾನುವಾರ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ. ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್ ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?