ಸಂಸದ ಪ್ರತಾಪ್ ಸಿಂಹ 
ರಾಜ್ಯ

ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಇಲ್ಲ- ಸಂಸದ ಪ್ರತಾಪ್ ಸಿಂಹ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾಳೆ ಮಂಡ್ಯದಲ್ಲಿ ಬಿಜೆಪಿ ಬೃಹತ್  ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾಳೆ ಮಂಡ್ಯದಲ್ಲಿ ಬಿಜೆಪಿ ಬೃಹತ್  ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರು- ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಆದರೆ, ಈ ಕುರಿತು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಮತ್ತು ಮಾಡುವುದು ತಪ್ಪಾಗುತ್ತದೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ಇದೆ ಎಂದು ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ಪೊಲೀಸರಿಂದ ಅನುಮತಿ ನಿರಾಕರಣೆ ಹಿನ್ನೆಲೆ ಇಂಡುವಾಳುಯಿಂದ ಸಂಜಯ ವೃತ್ತಕ್ಕೆ ಪ್ರತಿಭಟನೆ ಸ್ಥಳಾಂತರವಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಸಿದ್ದರಾಮಯ್ಯ ಭೇಟಿ ಮನವಿ ಸಲ್ಲಿಸಿದ ನಿಯೋಗ

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

ST ವರ್ಗ ಸೇರ್ಪಡೆಗೆ ಆಗ್ರಹ: ಡಿ.15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆ

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯೂ ಹೌದು: ರಾಜ್ಯ ಸರ್ಕಾರ

ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಇತಿಹಾಸವಿಲ್ಲ, ನಿಸ್ಪಕ್ಷಪಾತವಾಗಿ ಕೆಲಸ ಮಾಡಿದ್ದೇನೆ: ಬಸವರಾಜ ಹೊರಟ್ಟಿ

SCROLL FOR NEXT