ಸಂಗ್ರಹ ಚಿತ್ರ 
ರಾಜ್ಯ

ಮದುವೆಯಾಗುವುದಾಗಿ ಹೇಳಿ ವಂಚನೆ: 70 ವರ್ಷದ ವೃದ್ಧನ ಮೇಲೆ 63ರ ವೃದ್ಧೆಯಿಂದ ದೂರು ದಾಖಲು!

ಐದು ವರ್ಷಗಳಿಂದ ಜೊತೆಗೆ ಸುತ್ತಾಡಿ, ಮದುವೆಯಾಗುವುದಾಗಿ ನಂಬಿಸಿ ಇದೀಗ ಮೋಸ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ 70 ವರ್ಷದ ವೃದ್ಧನ ಮೇಲೆ 63 ವರ್ಷದ ವೃದ್ಧೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಐದು ವರ್ಷಗಳಿಂದ ಜೊತೆಗೆ ಸುತ್ತಾಡಿ, ಮದುವೆಯಾಗುವುದಾಗಿ ನಂಬಿಸಿ ಇದೀಗ ಮೋಸ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ 70 ವರ್ಷದ ವೃದ್ಧನ ಮೇಲೆ 63 ವರ್ಷದ ವೃದ್ಧೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಲಸೂರು ನಿವಾಸಿ ದಯಾವಾಣಿ ದೂರು ನೀಡಿದ ವೃದ್ಧ ಮಹಿಳೆಯಾಗಿದ್ದಾರೆ. ದೂರು ಹಿನ್ನೆಲೆಯಲ್ಲಿ ಹಲಸೂರು ನಿವಾಸಿ ಲೋಕನಾಥನ್ ವಿರುದ್ಧ ಪ್ರಕಱಣ ದಾಖಲಿಸಿಕೊಂಡ, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಧವೆಯಾಗಿರುವ ವೃದ್ಧ ಮಹಿಳೆ ಹಾಗೂ ವೃದ್ಧ ಒಂದೇ ಪ್ರದೇಶದ ನಿವಾಸಿಗಳಾಗಿದ್ದು, ಬೆಳಗಿನ ವಾಕಿಂಗ್ ವೇಳೆ ಇಬ್ಬರೂ ಭೇಟಿಯಾಗುತ್ತಿದ್ದರು. ವೃದ್ಧ ವ್ಯಕ್ತಿ ತನ್ನ ವಿಚ್ಛೇದಿತ ಮಗನಿಗೆ ವಿವಾಹ ಮಾಡಲು ಹುಡುಗಿಗಾಗಿ ಹುಡುಕಾಟ ನಡೆಸಿದ್ದ. ಇದರಂತೆ ವೃದ್ಧ ಮಹಿಳೆಯ ಸಹಾಯವನ್ನು ಕೇಳಿದ್ದಾನೆ. ಇದಾದ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು ಅದು ಪ್ರೀತಿಗೆ ತಿರುಗಿದೆ. ನಂತರ ಇಬ್ಬರೂ ಜೊತೆಯಾಗಿ ಮುರುಡೇಶ್ವರ, ಸಿಂಗಂದೂರು, ಶ್ರೀರಂಗಪಟ್ಟಣ ಸೇರಿದಂತೆ ಹಲವೆಡೆ ಪ್ರವಾಸ ಮಾಡಿದ್ದಾರೆ.

ಇವರಿಬ್ಬರು ಕೆಲ ಸಮಯದಿಂದ ಸಂಬಂಧದಲ್ಲಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಮಗನ ಮದುವೆಗೆ ಲೋಗನಾಥನ್ ಸಿದ್ಧತೆ ನಡೆಸಿದ್ದರು.

ಇದೇ ಸಂದರ್ಭದಲ್ಲಿ ತನ್ನನ್ನು ಮದುವೆಯಾಗುವಂತೆ ದಯಾವಾಣಿ ಕೇಳಿದ್ದು, ಲೋಕನಾಥನ್ ಇದಕ್ಕೆ ನಿರಾಕರಿಸಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ವಇಚ್ಛೆಯಿಂದ ಇಬ್ಬರೂ ಸಂಬಂಧದಲ್ಲಿದ್ದರು. ಪ್ರಕರಣ ಸಂಬಂಧ ಯಾರ ಬಂಧನವೂ ಆಗಿಲ್ಲ. ವೃದ್ಧ ವ್ಯಕ್ತಿಯ ಹೇಳಿಕೆ ದಾಖಲಿಸಿಕೊಳ್ಳಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪೂರ್ವ ವಲಯ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT