ಆನೆ ದಾಳಿಗೆ ಬಲಿಯಾದ ಮಹಿಳೆ. 
ರಾಜ್ಯ

ಕೊಡಗು; ಸಿದ್ದಾಪುರ ಬಳಿ ಕಾಡಾನೆ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮಡಿಕೇರಿ: ಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಆಯಿಶಾ(63) ಮೃತ ಮೃತ ದುರ್ಧೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಆನೆ ದಾಳಿ ನಡೆಸಿದೆ. ಈ ವೇಳೆ ಆಯಿಶಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದು ಕಳೆದ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆಯಾಗಿದೆ. ಕೆಲವೇ ದಿನಗಳ ಹಿಂದೆ ದಕ್ಷಿಣ ಕೊಡಗಿನ ಅರೆಕಾಡು ಪ್ರದೇಶದಲ್ಲಿ ಕಟ್ಟೆಮಾಡು ದೇವಪ್ಪ (58) ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು.

ವಾರದ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ಮಾನವ-ಪ್ರಾಣಿ ಸಂಘರ್ಷ ನಿವಾರಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ಆರೋಪಿಸಿದರು. ಅಲ್ಲದೆ, ಪುಂಡಾನೆಯನ್ನು ಸೆರೆಹಿಡಿಯುವಂತೆ ಆಗ್ರಹಿಸಿದರು. ಇದೇ ವೇಳೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು.

ಬಳಿಕ ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಎ.ಟಿ.ಪೂವಯ್ಯ, ವಿರಾಜಪೇಟೆ ಡಿಸಿಎಫ್ ಶರಣಪ್ಪ ಮತ್ತಿತರರು ಭೇಟಿ ನೀಡಿದ್ದರು. ಈ ವೇಳೆ ಆನೆಯನ್ನು ಸೆರೆ ಹಿಡಿಯುವ ಭರವಸೆ ನೀಡಿದರು.

ಮಳೆಯ ನಂತರ ಕಂದಕಗಳು ಮತ್ತು ಸೋಲಾರ್ ಬೇಲಿಗೆಳು ನಿಷ್ಕ್ರಿಯಗೊಂಡಿವೆ. ಹಲವು ಪ್ರದೇಶಗಳಲ್ಲಿ ಗೇಟ್ ಗಳನ್ನು ಹಾಕಲಾಗಿದೆ. ರಾತ್ರಿಯ ಸಮಯದಲ್ಲಿ ಗೇಟ್ ಗಳನ್ನು ಹಾಕಲಾಗಿರುತ್ತದೆ. ಆದರೆ, ತಮ್ಮ ಪ್ರಯಾಣದ ಸಂದರ್ಭದಲ್ಲಿ ಗ್ರಾಮಸ್ಥರು ತೆರೆದಿಡುತ್ತಾರೆ. ಇದರಿಂದ ಘಟನೆ ಸಂಭವಿಸುತ್ತಿದೆ. ಆದರೂ ಆನೆಗಳ ಓಡಾಟ ನಿಯಂತ್ರಿಸಲು ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಕಾಡಾನೆಗಳ ಪ್ರವೇಶ ತಡೆಯಲು ಕಾಂಕ್ರೀಟ್ ಗೋಡೆ ನಿರ್ಮಾಣ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಡಲಾಗಿದೆ ಎಂದು ಡಿಸಿಎಫ್‌ ಶರಣಪ್ಪ ಅವರು ಹೇಳಿದರು.

ಪುಂಡಾನೆಗಳ ಗುರುತಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಎರಡು ಆನೆಗಳ ಸೆರೆ ಹಿಡಿಯಲು ಅನುಮತಿ ಸಿಕ್ಕಿದೆ. ಕಳೆದ ವಾರ ಒಂದು ಆನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತೊಂದು ಆನೆ ಪತ್ತೆ ಮಾಡಿ, ಶೀಘ್ರದಲ್ಲೇ ಸೆರೆ ಹಿಡಿಯಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT