ದರೋಡೆ (ಸಂಗ್ರಹ ಚಿತ್ರ) 
ರಾಜ್ಯ

ಕಾಲೇಜಿನ ಹೊರಗೆ ಇಬ್ಬರು ಎನ್ಎಲ್ಎಸ್ಐ ಯು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿ ದರೋಡೆ

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ದ್ವಿತೀಯ ವರ್ಷದ ವಿದ್ಯಾರ್ಥಿ ಹಾಗೂ ಆತನ ಸಹಪಾಠಿ ಇಬ್ಬರನ್ನೂ ಚಾಕು ತೋರಿಸಿ ಬೆದರಿಸಿ ಸಶಸ್ತ್ರ ದರೋಡೆಕೋರರೊಬ್ಬರು ದರೋಡೆ ಮಾಡಿರುವ ಘಟನೆ ವರದಿಯಾಗಿದೆ. 

ಬೆಂಗಳೂರು:ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ದ್ವಿತೀಯ ವರ್ಷದ ವಿದ್ಯಾರ್ಥಿ ಹಾಗೂ ಆತನ ಸಹಪಾಠಿ ಇಬ್ಬರನ್ನೂ ಚಾಕು ತೋರಿಸಿ ಬೆದರಿಸಿ ಸಶಸ್ತ್ರ ದರೋಡೆಕೋರರೊಬ್ಬರು ದರೋಡೆ ಮಾಡಿರುವ ಘಟನೆ ವರದಿಯಾಗಿದೆ. 

ಇಬ್ಬರೂ ವಿದ್ಯಾರ್ಥಿಗಳಿಂದ ಮೊಬೈಲ್ ಕಸಿದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ಬೆಂಗಳೂರು ವಿವಿಯ ರಸ್ತೆಯಲ್ಲಿರುವ ಕಾಲೇಜು ಗೇಟ್ ನ ನಂ.02 ರ ಬಳಿ ರಾತ್ರಿ 12.15 ರ ವೇಳೆಗೆ ವಿದ್ಯಾರ್ಥಿಗಳು ಕುಳಿತಿದ್ದರು. ಈ ಅವಧಿಯಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಾಕು ಹಿಡಿದು ಬೆದರಿಕೆ ಹಾಕಿ ಇಬ್ಬರೂ ಸಂತ್ರಸ್ತರ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. 

ಗೌತಮ್ ರಾಜ್ ಫುಲೇರಾ ಮತ್ತು ನಿಶು ರಾಣಿ ಸಂತ್ರಸ್ತರಾಗಿದ್ದಾರೆ. ಬಳಿಕ ಸಂತ್ರಸ್ತ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಗೆ ಕರೆ ಮಾಡಿ ಮೊಬೈಲ್ ನ್ನು ವಾಪಸ್ ನೀಡುವಂತೆ ಕೇಳಿದ್ದಾರೆ. ಆದರೆ ದುಷ್ಕರ್ಮಿಗಳು ಮೊಬೈಲ್ ವಾಪಸ್ ಬೇಕೆಂದರೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಹಣ ನೀಡದೇ ಇದ್ದಲ್ಲಿ ಮೊಬೈಲ್ ನಲ್ಲಿರುವ ಖಾಸಗಿ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು. 

ಬೆದರಿಕೆಗೆ ಹೆದರಿದ ವಿದ್ಯಾರ್ಥಿಗಳು 5,000 ರೂಪಾಯಿ ಕಳಿಸಿದ್ದಾರೆ. ಆದರೆ ಫೋನ್ ಗಳನ್ನು ದುಷ್ಕರ್ಮಿಗಳು ವಾಪಸ್ ನೀಡಲಿಲ್ಲ. 

ಆರೋಪಿಗಳು ಹೋಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಬಂದು ಸುಮಾರು 45,000 ರೂಪಾಯಿ ಮೌಲ್ಯದ ಫೋನ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಫುಲೇರಾ  ಮುಂಜಾನೆ 3.30 ರ ಸುಮಾರಿಗೆ ಪೊಲೀಸ್ ದೂರು ದಾಖಲಿಸಿದ್ದಾರೆ. ಆರೋಪಿ ತಪ್ಪಿಸಿಕೊಂಡ ನಂತರ, ಫುಲೇರಾ ಪರಿಚಿತ ವ್ಯಕ್ತಿಯ ಮೊಬೈಲ್ ಫೋನ್ ತೆಗೆದುಕೊಂಡು ಅವನ ಫೋನ್‌ಗೆ ಕರೆ ಮಾಡಿದನು. ಆಗ ಆರೋಪಿ ಸಂತ್ರಸ್ತನ ಬಳಿ 15,000 ರೂಪಾಯಿ ಬೇಡಿಕೆ ಇಟ್ಟಿದ್ದ. ಆದರೆ ಸಂತ್ರಸ್ತರು 5,000 ರೂಪಾಯಿ ಕಳಿಸಿದರು. ಹಣ ಸಿಕ್ಕ ಬಳಿಕ ಎರಡೂ ಮೊಬೈಲ್ ಗಳನ್ನು ಸ್ವಿಚ್ ಆಫ್ ಮಾಡಲಾಗಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 392 ರ ಅಡಿಯಲ್ಲಿ ದರೋಡೆ ಪ್ರಕರಣವನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!