ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜ್ಯ

ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಡಿಸಿಎಂ ಡಿಕೆ ಶಿವಕುಮಾರ್

ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಹಾಸನ: ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಸಕಲೇಶಪುರದ ಹೆಬ್ಬನಹಳ್ಳಿ ವಿದ್ಯುತ್ ಉಪ ಕೇಂದ್ರದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಡಿಸಿಎಂ, ವಿಶ್ವೇಶ್ವರಯ್ಯ ಜಲ ನಿಗಮ ವತಿಯಿಂದ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಕುಡಿಯುವ ನೀರಿನ ಯೋಜನೆ ವಿಳಂಬ ಆಗದಂತೆ ಕಾಮಗಾರಿ ಚುರುಕುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ವಿಶ್ವೇಶ್ವರಯ್ಯ ಜಲ ನಿಗಮ ಆಯೋಜಿಸಿದ್ದ ಈ ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸತ್ಯಭಾಮ ಮತ್ತಿತರ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು. 

ಸಭೆಗೂ ಮುನ್ನಾ  ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದ ಉಪ ಮುಖ್ಯಮಂತ್ರಿ, ವಿದ್ಯುತ್ ಉಪಕೇಂದ್ರ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT