ಸಂಗ್ರಹ ಚಿತ್ರ 
ರಾಜ್ಯ

ಸಾಹಿತಿ, ಚಿಂತಕರಿಗೆ ಭದ್ರತೆ ಒದಗಿಸಲು ಸರ್ಕಾರ ಸಿದ್ಧ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆದರಿಕೆ ಎದುರಿಸುತ್ತಿರುವ ಸಾಹಿತಿಗಳು ಮತ್ತು ಚಿಂತಕರಿಗೆ ಅಗತ್ಯ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಸಾಹಿತಿಗಳು ಬಯಸಿದರೆ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಬೆದರಿಕೆ ಎದುರಿಸುತ್ತಿರುವ ಸಾಹಿತಿಗಳು ಮತ್ತು ಚಿಂತಕರಿಗೆ ಅಗತ್ಯ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಸಾಹಿತಿಗಳು ಬಯಸಿದರೆ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಕೆ. ಮರುಳಸಿದ್ದಪ್ಪ ನೇತೃತ್ವದಲ್ಲಿ ಪರಮೇಶ್ವರ ಅವರನ್ನು ಮಂಗಳವಾರ ಭೇಟಿ ಮಾಡಿದ ಸಾಹಿತಿಗಳು, ನಿರಂತರವಾಗಿ ಬೆದರಿಕೆ ಕರೆಗಳು ಮತ್ತು ಪತ್ರಗಳು ಬರುತ್ತಿರುವ ಕುರಿತು ಮಾಹಿತಿ ನೀಡಿದರು. ಈ ವೇಳೆ ಸಾಹಿತಿಗಳ ಜೊತೆ ಸಭೆ ನಡೆಸಿದ ಗೃಹ ಸಚಿವರು ಈ ಕುರಿತು ವಿವರವಾಗಿ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ‘ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಕಾರಣದಿಂದ ರಾಜ್ಯದಲ್ಲಿ ಗೌರಿ ಲಂಕೇಶ್‌ ಮತ್ತು ಎಂ.ಎಂ. ಕಲಬುರ್ಗಿ ಅವರ ಕೊಲೆಗಳಾಗಿವೆ. ಈಗಲೂ ಹಲವು ಸಾಹಿತಿಗಳಿಗೆ ಬೆದರಿಕೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ತನಿಖೆ ನಡೆಸಲಾಗುವುದು’ ಎಂದು ಹೇಳಿದರು.

ಸಾಹಿತಿಗಳು ಸಲ್ಲಿಸಿರುವ ಮನವಿ ಪತ್ರವನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನೀಡಲಾಗಿದೆ. ಅವರು ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. ಇಬ್ಬರು ಸಾಹಿತಿಗಳಿಗೆ ಪೊಲೀಸ್ ಭದ್ರತೆಯನ್ನು ಈಗಾಗಲೇ ಒದಗಿಸಲಾಗಿದೆ. ಇನ್ನು ಯಾವುದೇ ಸಾಹಿತಿಗಳು ಕೋರಿಕೆ ಸಲ್ಲಿಸಿದರೆ ವೈಯಕ್ತಿಕ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದರು.

ಮರುಳಸಿದ್ದಪ್ಪ ಮಾತನಾಡಿ, ‘ಬಿಜೆಪಿಯ ಅಪಾಯಕಾರಿ ನಡೆಯನ್ನು ನಾವು ಟೀಕಿಸಿದ್ದೇವೆ. ಇದರಿಂದ ಬಿಜೆಪಿಯವರಿಗೆ ಆತಂಕವಾಗಿದೆ. ಗೌರಿ ಲಂಕೇಶ್‌ ಕೊಲೆ ಏಕೆ ನಡೆದಿದೆ ಎಂಬುದು ಗೊತ್ತಿದೆ. ಅದೇ ಗುಂಪು ನಮ್ಮನ್ನು ಬೆದರಿಸುತ್ತಿದೆ. ಆ ಗುಂಪನ್ನು ಪತ್ತೆಹಚ್ಚಬೇಕು’ ಎಂದರು.

ಈ ಸಂದರ್ಭದಲ್ಲಿ ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಜಿ. ರಾಮಕೃಷ್ಣ, ಎಲ್‌.ಎನ್‌. ಮುಕುಂದರಾಜ್‌, ಜಾಣಗೆರೆ ವೆಂಕಟರಾಮಯ್ಯ ಸೇರಿದಂತೆ ಹಲವು ಸಾಹಿತಿಗಳು ನಿಯೋಗದಲ್ಲಿದ್ದರು. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಬಿ. ದಯಾನಂದ ಕೂಡ ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT