ಸಾಂಕೇತಿಕ ಚಿತ್ರ 
ರಾಜ್ಯ

ಕನ್ನಡ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ:  ಪಾಠ ಕೈಬಿಡಲು ಆಗ್ರಹಿಸಿ ವಿಪ್ರ ಒಕ್ಕೂಟದಿಂದ ಪ್ರತಿಭಟನೆ

8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.

ಬೆಂಗಳೂರು: 8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
 
ಮಿನಿ ವಿಧಾನಸೌಧದ ಎದುರು ಸಮುದಾಯದ ಒಕ್ಕೂಟ ಪ್ರತಿಭಟನೆ ನಡೆಸಿದೆ. ಸರ್ದಾರ್ ವಲ್ಲಭ ಭಾಯ್ ಪಟೇಲ್ ವೃತ್ತದಿಂದ ಮಿನಿ ವಿಧಾನಸೌಧಕ್ಕೆ ಮೆರವಣಿಗೆಯಲ್ಲಿ ಆಗಮಿಸಿದ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

" 8 ನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ವಿಜಯಮಾಲ ರಂಗನಾಥ್ ಅವರು ಬರೆದಿರುವ ರಕ್ತದ ಗುಂಪು ಎಂಬ ಪಾಠದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಇದರಿಂದ ಸಮುದಾಯದ ಭಾವನೆಗಳಿಗೆ ನೋವುಂಟಾಗಿದೆ ಎಂದು ಮನವಿ ಪತ್ರದಲ್ಲಿ ಒಕ್ಕೂಟ ತಿಳಿಸಿದೆ. 

ಪಠ್ಯಪುಸ್ತಕದಿಂದ ಪಾಠ ಹಿಂಪಡೆಯಬೇಕು, ಇಲ್ಲವಾದಲ್ಲಿ  ಬೇಡಿಕೆ  ಈಡೇರುವವರೆಗೂ ಹೋರಾಟ ದುವರಿಸುವುದಾಗಿ ಒಕ್ಕೂಟ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT