ನಟ ಚೇತನ್ ಅಹಿಂಸಾ 
ರಾಜ್ಯ

ಚಂದ್ರಯಾನ-3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ವಿಜ್ಞಾನಿಗಳಿಗೋ ಅಥವಾ 'ಲಾರ್ಡ್' ತಿರುಪತಿಗೋ?

ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ ಅಥವಾ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ 3 ಯಶಸ್ವಿಯಾಗಿದ್ದು, ಭಾರತ ಹೊಸ ದಾಖಲೆ ಬರೆದಿದೆ. ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ‘ಚಂದ್ರಯಾನ–3 ಯೋಜನೆ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡಲ್ ಚಂದ್ರನ ಮೇಲೆ ಇಳಿದ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ ಎಂದಿದ್ದಾರೆ. 

ಮುಂದುವರಿದು, ಆದರೆ, ಚಂದ್ರಯಾನ–3ರ ಈ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿರುವ ಅವರು, 'ವಾಸ್ತವ' ಎಂದು ಬರೆದುಕೊಂಡಿದ್ದು, ಚಂದ್ರಯಾನ-3 ನೌಕೆಯ ಉಡಾವಣೆ ಚಿತ್ರ ಮತ್ತು ವ್ಯಕ್ತಿಯೊಬ್ಬ ಮ್ಯಾನ್‌ಹೋಲ್‌ಗೆ ಇಳಿದಿರುವ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ.

ಆಗಸ್ಟ್ 23ರ ಬುಧವಾರ ಸಂಜೆ 6.04 ನಿಮಿಷಕ್ಕೆ ಸರಿಯಾಗಿ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡ್ ರೋವರ್ ಇಳಿದಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ. ಇಸ್ರೋ ಚಂದ್ರಯಾನ-3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT