ಹೈಕೋರ್ಟ್ 
ರಾಜ್ಯ

ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ: ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಶಾಸಕ ಸಿಕೆ ರಾಮಮೂರ್ತಿ ಅವರ ಆಯ್ಕೆಯನ್ನು ಪ್ರಶ್ನಿಸಿ ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್‌ನ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.

ಬೆಂಗಳೂರು: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಶಾಸಕ ಸಿಕೆ ರಾಮಮೂರ್ತಿ ಅವರ ಆಯ್ಕೆಯನ್ನು ಪ್ರಶ್ನಿಸಿ ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್‌ನ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.

ಮೇ 13ರಂದು ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರತಿಸ್ಪರ್ಧಿ ರಾಮಮೂರ್ತಿ ಅವರ ಆಯ್ಕೆಯನ್ನು ಪ್ರಶ್ನಿಸಿ ಸೌಮ್ಯಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ರಾಚಯ್ಯ ಅವರು ಮುಂದೂಡಿದ್ದಾರೆ.

ಆಗಸ್ಟ್ 1ರಂದು ನ್ಯಾಯಾಲಯ ರಾಮಮೂರ್ತಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಮತ ಎಣಿಕೆಯಲ್ಲಿನ ಕಾರ್ಯವಿಧಾನದ ಲೋಪವನ್ನು ಎತ್ತಿ ತೋರಿಸಿರುವ ಅರ್ಜಿದಾರರು, ಮತದಾನಕ್ಕೆ ಗೈರುಹಾಜರಾಗಿದ್ದ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಸೇರಿದಂತೆ 540 ಮತಗಳು ಚಲಾವಣೆಯಾಗಿವೆ ಎಂದು ಹೇಳಿದರು. ಆದರೆ, ಚುನಾವಣಾ ನಿಯಮಾವಳಿಯ ನಿಯಮ 27ಸಿ ಅಡಿಯಲ್ಲಿ ನಿರ್ದಿಷ್ಟ ಅವಧಿಯೊಳಗೆ ಸ್ವೀಕರಿಸಿದ, ತಿರಸ್ಕರಿಸಿದ ಮತ್ತು ಸ್ವೀಕರಿಸಿದ ಮತದಾರರ ಸಂಖ್ಯೆಯನ್ನು ಚುನಾವಣಾಧಿಕಾರಿ ಬಹಿರಂಗಪಡಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಆದ್ದರಿಂದ, ಇದು ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಇದು ರಾಮಮೂರ್ತಿ ಅವರ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದ ಅರ್ಜಿದಾರರು, ಅಂಚೆ ಮತ ಎಣಿಕೆಯಲ್ಲಿನ ಇತರ ಲೋಪಗಳನ್ನು ಎತ್ತಿ ತೋರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!