ಸಾಂದರ್ಭಿಕ ಚಿತ್ರ 
ರಾಜ್ಯ

ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವು

ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ. 

ಮಡಿಕೇರಿ: ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ. 

ಸೋಮವಾರಪೇಟೆ ತಾಲೂಕಿನ ಬಾಣಾವರ ಅರಣ್ಯ ವ್ಯಾಪ್ತಿಯ ಆದಿನಾದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮೃತ ರೈತನನ್ನು ಬಣಗೇರಿ ಈರಪ್ಪ(63) ಎಂದು ಗುರುತಿಸಲಾಗಿದೆ. ಕಾಣೆಯಾದ ಹಸು ಹುಡುಕಿಕೊಂಡು ಹೋಗಿದ್ದ ರೈತನ ಮೇಲೆ ಆನೆ ದಾಳಿ ಮಾಡಿದೆ. ದಾಳಿಗೊಳಗಾದ ಈರಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆನೆ ಓಡಿಸುವ ಪ್ರಯತ್ನ ಮಾಡಿದ್ದಾರೆ.

ಘಟನೆ ಕುರಿತು ಸೋಮವಾರಪೇಟೆ ಪೊಲೀಸರು ಹಾಗೂ ಸೋಮವಾರಪೇಟೆ ವಿಭಾಗದ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಮತ್ತಿತರರು ಭೇಟಿ ನೀಡಿದ್ದರು. 

ಈರಪ್ಪ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. 
ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಡಿಕೇರಿ ಡಿಸಿಎಫ್ ಎಟಿ ಪೂವಯ್ಯ ಅವರು ಆಸ್ಪತ್ರೆಯಲ್ಲಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಘಟನೆಯ ಮಾಹಿತಿ ಸಂಗ್ರಹಿಸಿದರು ಮತ್ತು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!