ಪ್ರಾತಿನಿಧಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಮೇಳ ನಡೆಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕಿಶನ್‌ರಾವ್ ಕರದ್ ಅವರು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಗಳಿಂದ ಸಾಲ ಪಡೆಯಲು ಸ್ವನಿಧಿ ಮೇಳವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. 

ಬೆಂಗಳೂರು: ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕಿಶನ್‌ರಾವ್ ಕರದ್ ಅವರು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಗಳಿಂದ ಸಾಲ ಪಡೆಯಲು ಸ್ವನಿಧಿ ಮೇಳವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. 

4.3 ಲಕ್ಷ ಫಲಾನುಭವಿಗಳ ಪೈಕಿ 3.2 ಲಕ್ಷ ಮಂದಿಯನ್ನು ಒಳಗೊಂಡ ಪ್ರಧಾನಮಂತ್ರಿ ಸ್ವನಿಧಿ ಯೋಜನೆ (ಬೀದಿ ವ್ಯಾಪಾರಿಗಳಿಗೆ ಸಾಲ) ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕರ್ನಾಟಕವು ಶೇ 68 ರಷ್ಟು ಸಾಧಿಸಿದೆ.

ಭಗವತ್ ಕಿಶನ್‌ರಾವ್ ಕರದ್

ಈವರೆಗೆ 423 ಕೋಟಿ ರೂ. ಗಳನ್ನು ಈ ಯೋಜನೆಯಡಿಯಲ್ಲಿ ವಿತರಿಸಲಾಗಿದೆ. ಹೆಚ್ಚಿನ ಮಾರಾಟಗಾರರು ಈ ಯೋಜನೆಯ ಲಾಭ ಪಡೆಯಲು ಸಹಾಯ ಮಾಡಲು, ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಬುಧವಾರ ಕಿಯೋಸ್ಕ್‌ಗಳನ್ನು ತೆರೆಯಲು ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ನೀಡಲಾದ ಪ್ರಮಾಣಪತ್ರವು ಅವರನ್ನು ಅಧಿಕೃತ ಬೀದಿ ವ್ಯಾಪಾರಿಗಳನ್ನಾಗಿ ಮಾಡುತ್ತದೆ ಮತ್ತು ಇದು ಪೊಲೀಸ್ ಮತ್ತು ಕಾರ್ಪೊರೇಷನ್ ಅಧಿಕಾರಿಗಳಿಂದ ಅವರನ್ನು ರಕ್ಷಿಸುತ್ತದೆ.

ಭಗವತ್ ಕಿಶನ್‌ರಾವ್ ಕರದ್ ಮಾತನಾಡಿ, ಬ್ಯಾಂಕ್ ಸಾಲ ಪಡೆಯಲು ಒಂದೆಡೆಯಿಂದ ಮತ್ತೊಂದೆಡೆಗೆ ತಿರುಗಾಡಬೇಕು ಎಂಬ ಆರೋಪಗಳಿವೆ. 'ನಾವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಅವರ ಸಾಲಗಳನ್ನು ಅನುಮೋದಿಸಲು ಸೂಚಿಸಿದ್ದೇವೆ. ಫಲಾನುಭವಿಗಳು ಯುಎಲ್‌ಬಿಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು, ಬ್ಯಾಂಕ್ ಖಾತೆಗಳು ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರಬೇಕು' ಎಂದು ಅವರು ಹೇಳಿದರು.

ಡಿಸೆಂಬರ್ 2023ರ ವೇಳೆಗೆ 50 ಲಕ್ಷ ಫಲಾನುಭವಿಗಳ ಗುರಿಯನ್ನು ಹೊಂದಿದ್ದು, ಈಗಾಗಲೇ 43 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಲಾಭ ಪಡೆದಿದ್ದಾರೆ ಎಂದರು.

ಬೀದಿಬದಿ ವ್ಯಾಪಾರಿಗಳು ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ವಹಿವಾಟು ಆರಂಭಿಸಿದರೆ, ಅವರಿಗೆ ತಿಂಗಳಿಗೆ 100 ರೂ. ನೀಡಲಾಗುತ್ತದೆ. ದೊಡ್ಡ ನಗರಗಳಲ್ಲಿ, ಪೊಲೀಸ್ ಮತ್ತು ಕಾರ್ಪೊರೇಷನ್ ಸಿಬ್ಬಂದಿ ಬೀದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಾರೆ ಎಂಬ ಆರೋಪಗಳಿವೆ. ಸ್ವನಿಧಿ ಯೋಜನೆಯಡಿ ನೀಡಲಾದ ಪ್ರಮಾಣಪತ್ರವು ಅವರನ್ನು ಅಧಿಕೃತ ಬೀದಿ ವ್ಯಾಪಾರಿಗಳನ್ನಾಗಿ ಮಾಡುತ್ತದೆ ಮತ್ತು ಅವರು ಅದನ್ನು ತಪಾಸಣೆಗೆ ಬರುವ ಅಧಿಕಾರಿಗಳಿಗೆ ತೋರಿಸಬಹುದು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT