ಪ್ರಾತಿನಿಧಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಮೇಳ ನಡೆಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕಿಶನ್‌ರಾವ್ ಕರದ್ ಅವರು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಗಳಿಂದ ಸಾಲ ಪಡೆಯಲು ಸ್ವನಿಧಿ ಮೇಳವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. 

ಬೆಂಗಳೂರು: ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕಿಶನ್‌ರಾವ್ ಕರದ್ ಅವರು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಗಳಿಂದ ಸಾಲ ಪಡೆಯಲು ಸ್ವನಿಧಿ ಮೇಳವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. 

4.3 ಲಕ್ಷ ಫಲಾನುಭವಿಗಳ ಪೈಕಿ 3.2 ಲಕ್ಷ ಮಂದಿಯನ್ನು ಒಳಗೊಂಡ ಪ್ರಧಾನಮಂತ್ರಿ ಸ್ವನಿಧಿ ಯೋಜನೆ (ಬೀದಿ ವ್ಯಾಪಾರಿಗಳಿಗೆ ಸಾಲ) ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕರ್ನಾಟಕವು ಶೇ 68 ರಷ್ಟು ಸಾಧಿಸಿದೆ.

ಭಗವತ್ ಕಿಶನ್‌ರಾವ್ ಕರದ್

ಈವರೆಗೆ 423 ಕೋಟಿ ರೂ. ಗಳನ್ನು ಈ ಯೋಜನೆಯಡಿಯಲ್ಲಿ ವಿತರಿಸಲಾಗಿದೆ. ಹೆಚ್ಚಿನ ಮಾರಾಟಗಾರರು ಈ ಯೋಜನೆಯ ಲಾಭ ಪಡೆಯಲು ಸಹಾಯ ಮಾಡಲು, ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಬುಧವಾರ ಕಿಯೋಸ್ಕ್‌ಗಳನ್ನು ತೆರೆಯಲು ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ನೀಡಲಾದ ಪ್ರಮಾಣಪತ್ರವು ಅವರನ್ನು ಅಧಿಕೃತ ಬೀದಿ ವ್ಯಾಪಾರಿಗಳನ್ನಾಗಿ ಮಾಡುತ್ತದೆ ಮತ್ತು ಇದು ಪೊಲೀಸ್ ಮತ್ತು ಕಾರ್ಪೊರೇಷನ್ ಅಧಿಕಾರಿಗಳಿಂದ ಅವರನ್ನು ರಕ್ಷಿಸುತ್ತದೆ.

ಭಗವತ್ ಕಿಶನ್‌ರಾವ್ ಕರದ್ ಮಾತನಾಡಿ, ಬ್ಯಾಂಕ್ ಸಾಲ ಪಡೆಯಲು ಒಂದೆಡೆಯಿಂದ ಮತ್ತೊಂದೆಡೆಗೆ ತಿರುಗಾಡಬೇಕು ಎಂಬ ಆರೋಪಗಳಿವೆ. 'ನಾವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಅವರ ಸಾಲಗಳನ್ನು ಅನುಮೋದಿಸಲು ಸೂಚಿಸಿದ್ದೇವೆ. ಫಲಾನುಭವಿಗಳು ಯುಎಲ್‌ಬಿಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು, ಬ್ಯಾಂಕ್ ಖಾತೆಗಳು ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರಬೇಕು' ಎಂದು ಅವರು ಹೇಳಿದರು.

ಡಿಸೆಂಬರ್ 2023ರ ವೇಳೆಗೆ 50 ಲಕ್ಷ ಫಲಾನುಭವಿಗಳ ಗುರಿಯನ್ನು ಹೊಂದಿದ್ದು, ಈಗಾಗಲೇ 43 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಲಾಭ ಪಡೆದಿದ್ದಾರೆ ಎಂದರು.

ಬೀದಿಬದಿ ವ್ಯಾಪಾರಿಗಳು ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ವಹಿವಾಟು ಆರಂಭಿಸಿದರೆ, ಅವರಿಗೆ ತಿಂಗಳಿಗೆ 100 ರೂ. ನೀಡಲಾಗುತ್ತದೆ. ದೊಡ್ಡ ನಗರಗಳಲ್ಲಿ, ಪೊಲೀಸ್ ಮತ್ತು ಕಾರ್ಪೊರೇಷನ್ ಸಿಬ್ಬಂದಿ ಬೀದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಾರೆ ಎಂಬ ಆರೋಪಗಳಿವೆ. ಸ್ವನಿಧಿ ಯೋಜನೆಯಡಿ ನೀಡಲಾದ ಪ್ರಮಾಣಪತ್ರವು ಅವರನ್ನು ಅಧಿಕೃತ ಬೀದಿ ವ್ಯಾಪಾರಿಗಳನ್ನಾಗಿ ಮಾಡುತ್ತದೆ ಮತ್ತು ಅವರು ಅದನ್ನು ತಪಾಸಣೆಗೆ ಬರುವ ಅಧಿಕಾರಿಗಳಿಗೆ ತೋರಿಸಬಹುದು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT