ಪ್ರಾತಿನಿಧಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಮೇಳ ನಡೆಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕಿಶನ್‌ರಾವ್ ಕರದ್ ಅವರು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಗಳಿಂದ ಸಾಲ ಪಡೆಯಲು ಸ್ವನಿಧಿ ಮೇಳವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. 

ಬೆಂಗಳೂರು: ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕಿಶನ್‌ರಾವ್ ಕರದ್ ಅವರು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಗಳಿಂದ ಸಾಲ ಪಡೆಯಲು ಸ್ವನಿಧಿ ಮೇಳವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. 

4.3 ಲಕ್ಷ ಫಲಾನುಭವಿಗಳ ಪೈಕಿ 3.2 ಲಕ್ಷ ಮಂದಿಯನ್ನು ಒಳಗೊಂಡ ಪ್ರಧಾನಮಂತ್ರಿ ಸ್ವನಿಧಿ ಯೋಜನೆ (ಬೀದಿ ವ್ಯಾಪಾರಿಗಳಿಗೆ ಸಾಲ) ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕರ್ನಾಟಕವು ಶೇ 68 ರಷ್ಟು ಸಾಧಿಸಿದೆ.

ಭಗವತ್ ಕಿಶನ್‌ರಾವ್ ಕರದ್

ಈವರೆಗೆ 423 ಕೋಟಿ ರೂ. ಗಳನ್ನು ಈ ಯೋಜನೆಯಡಿಯಲ್ಲಿ ವಿತರಿಸಲಾಗಿದೆ. ಹೆಚ್ಚಿನ ಮಾರಾಟಗಾರರು ಈ ಯೋಜನೆಯ ಲಾಭ ಪಡೆಯಲು ಸಹಾಯ ಮಾಡಲು, ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಬುಧವಾರ ಕಿಯೋಸ್ಕ್‌ಗಳನ್ನು ತೆರೆಯಲು ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ನೀಡಲಾದ ಪ್ರಮಾಣಪತ್ರವು ಅವರನ್ನು ಅಧಿಕೃತ ಬೀದಿ ವ್ಯಾಪಾರಿಗಳನ್ನಾಗಿ ಮಾಡುತ್ತದೆ ಮತ್ತು ಇದು ಪೊಲೀಸ್ ಮತ್ತು ಕಾರ್ಪೊರೇಷನ್ ಅಧಿಕಾರಿಗಳಿಂದ ಅವರನ್ನು ರಕ್ಷಿಸುತ್ತದೆ.

ಭಗವತ್ ಕಿಶನ್‌ರಾವ್ ಕರದ್ ಮಾತನಾಡಿ, ಬ್ಯಾಂಕ್ ಸಾಲ ಪಡೆಯಲು ಒಂದೆಡೆಯಿಂದ ಮತ್ತೊಂದೆಡೆಗೆ ತಿರುಗಾಡಬೇಕು ಎಂಬ ಆರೋಪಗಳಿವೆ. 'ನಾವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಅವರ ಸಾಲಗಳನ್ನು ಅನುಮೋದಿಸಲು ಸೂಚಿಸಿದ್ದೇವೆ. ಫಲಾನುಭವಿಗಳು ಯುಎಲ್‌ಬಿಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು, ಬ್ಯಾಂಕ್ ಖಾತೆಗಳು ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರಬೇಕು' ಎಂದು ಅವರು ಹೇಳಿದರು.

ಡಿಸೆಂಬರ್ 2023ರ ವೇಳೆಗೆ 50 ಲಕ್ಷ ಫಲಾನುಭವಿಗಳ ಗುರಿಯನ್ನು ಹೊಂದಿದ್ದು, ಈಗಾಗಲೇ 43 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಲಾಭ ಪಡೆದಿದ್ದಾರೆ ಎಂದರು.

ಬೀದಿಬದಿ ವ್ಯಾಪಾರಿಗಳು ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ವಹಿವಾಟು ಆರಂಭಿಸಿದರೆ, ಅವರಿಗೆ ತಿಂಗಳಿಗೆ 100 ರೂ. ನೀಡಲಾಗುತ್ತದೆ. ದೊಡ್ಡ ನಗರಗಳಲ್ಲಿ, ಪೊಲೀಸ್ ಮತ್ತು ಕಾರ್ಪೊರೇಷನ್ ಸಿಬ್ಬಂದಿ ಬೀದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಾರೆ ಎಂಬ ಆರೋಪಗಳಿವೆ. ಸ್ವನಿಧಿ ಯೋಜನೆಯಡಿ ನೀಡಲಾದ ಪ್ರಮಾಣಪತ್ರವು ಅವರನ್ನು ಅಧಿಕೃತ ಬೀದಿ ವ್ಯಾಪಾರಿಗಳನ್ನಾಗಿ ಮಾಡುತ್ತದೆ ಮತ್ತು ಅವರು ಅದನ್ನು ತಪಾಸಣೆಗೆ ಬರುವ ಅಧಿಕಾರಿಗಳಿಗೆ ತೋರಿಸಬಹುದು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT