ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ 
ರಾಜ್ಯ

ಚಂದ್ರಯಾನ-3 ಯಶಸ್ಸು ಕೇವಲ ಭಾರತೀಯರು ಮಾತ್ರವಲ್ಲದೆ ಜಗತ್ತಿನಾದ್ಯಂತ ವಿಜ್ಞಾನ ನಂಬುವ ಜನರಲ್ಲಿ ಉತ್ಸಾಹ- ಪ್ರಧಾನಿ ಮೋದಿ

ಚಂದ್ರಯಾನ-3 ಯಶಸ್ಸು ಕೇವಲ ಭಾರತೀಯರು ಮಾತ್ರವಲ್ಲದೆ ಜಗತ್ತಿನಾದ್ಯಂತ ವಿಜ್ಞಾನವನ್ನು ನಂಬುವ ಜನರಲ್ಲಿ  ಉತ್ಸಾಹ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ.

ಬೆಂಗಳೂರು: ಚಂದ್ರಯಾನ-3 ಯಶಸ್ಸು ಕೇವಲ ಭಾರತೀಯರು ಮಾತ್ರವಲ್ಲದೆ ಜಗತ್ತಿನಾದ್ಯಂತ ವಿಜ್ಞಾನವನ್ನು ನಂಬುವ ಜನರಲ್ಲಿ  ಉತ್ಸಾಹ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ.

ಚಂದ್ರಯಾನ-3ರ ಕಾರ್ಯಾಚರಣೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಳಗ್ಗೆ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೀಸ್ ನಿಂದ ಭಾರತಕ್ಕೆ ಹಿಂದಿರುಗಿದ ಕೂಡಲೇ ಬೆಂಗಳೂರಿಗೆ ಹೋಗಿ ಚಂದ್ರಯಾನ-3 ಯಶಸ್ಸಿನ ಹಿಂದಿನ ವಿಜ್ಞಾನಿಗಳಿಗೆ ಗೌರವ ಸಲ್ಲಿಸಲು ನಿರ್ಧರಿಸಿದ್ದಾಗಿ  ತಿಳಿಸಿದರು. 

ಬೆಂಗಳೂರಿಗೆ ಯಾವಾಗ ತಲುಪುತ್ತೇನೆ ಎಂಬುದು ಸರಿಯಾಗಿ ತಿಳಿದಿಲ್ಲದ ಕಾರಣ ಬರಮಾಡಿಕೊಳ್ಳಲು ಯಾವುದೇ ತೊಂದರೆ ತೆಗೆದುಕೊಳ್ಳದಂತೆ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೆ. ಚಂದ್ರಯಾನ-3 ಯಶಸ್ಸಿನಿಂದ ಇಸ್ರೋ ವಿಜ್ಞಾನಿಗಳು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿಗಳಾಗಿವೆ ಎಂದು ತಿಳಿಸಿದರು. 

ನಂತರ ವಿಮಾನ ನಿಲ್ದಾಣದಿಂದ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ತೆರೆದ ವಾಹನದಲ್ಲಿ ತೆರಳಿದ ಪ್ರಧಾನಿ ಮೋದಿಗೆ ಜನರಿಂದ ಅಭೂತಪೂರ್ವ ಸ್ವಾಗತ ದೊರೆಯಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT