ಪ್ರಾತಿನಿಧಿಕ ಚಿತ್ರ 
ರಾಜ್ಯ

ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಿದ್ದಾರೆ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು!

ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಮತ್ತು ಸಮಸ್ಯೆಗಳನ್ನು ತಿಳಿಯಲು ‘ಅಂಜುಮನ್‌ ತಾರಖಿ ಉರ್ದು’ ಎಂಬ ಎನ್‌ಜಿಒ ಜತೆಗೂಡಿ ನಾಲ್ವರು ನಿವೃತ್ತ ಐಎಎಸ್‌ ಅಧಿಕಾರಿಗಳು ಹಾಗೂ ಕೆಎಎಸ್‌ ಅಧಿಕಾರಿ ಸಮೀಕ್ಷೆ ನಡೆಸಲಿದ್ದಾರೆ.

ಬೆಂಗಳೂರು: ಕಳೆದ 15 ವರ್ಷಗಳಲ್ಲಿ ರಾಜ್ಯದಲ್ಲಿ ಸರ್ಕಾರಿ ಉರ್ದು ಶಾಲೆಗಳ ಸಂಖ್ಯೆ 5,000 ರಿಂದ 4,000ಕ್ಕೆ ಇಳಿದಿದ್ದು, ವಿದ್ಯಾರ್ಥಿಗಳು ಹೆಚ್ಚೆಚ್ಚು ಶಾಲೆ ಬಿಡುತ್ತಿದ್ದಾರೆ. 10ನೇ ತರಗತಿಗೆ ಬರುವುದರೊಳಗೆ ಸರ್ಕಾರಿ ಉರ್ದು ಶಾಲೆಗಳಲ್ಲಿ ಶೇ 50ರಷ್ಟು ವಿದ್ಯಾರ್ಥಿಗಳು ಶಾಲೆಯಿಂದ ದೂರ ಉಳಿಯುತ್ತಾರೆ. ಹೀಗಾಗಿ, ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಮತ್ತು ಸಮಸ್ಯೆಗಳನ್ನು ತಿಳಿಯಲು ‘ಅಂಜುಮನ್‌ ತಾರಖಿ ಉರ್ದು’ ಎಂಬ ಎನ್‌ಜಿಒ ಜತೆಗೂಡಿ ನಾಲ್ವರು ನಿವೃತ್ತ ಐಎಎಸ್‌ ಅಧಿಕಾರಿಗಳು ಹಾಗೂ ಕೆಎಎಸ್‌ ಅಧಿಕಾರಿ ಸಮೀಕ್ಷೆ ನಡೆಸಲಿದ್ದಾರೆ.

ಮಾಜಿ ಐಎಎಸ್ ಅಧಿಕಾರಿಗಳಾದ ಅಜೀಜುಲ್ಲಾ ಬೇಗ್, ಅದೋನಿ ಸಲೀಂ, ಮೀರ್ ಅನೀಶ್ ಅಹಮದ್, ಸಲಾವುದ್ದೀನ್ ಮತ್ತು ನಿವೃತ್ತ ಕೆಎಎಸ್ ಅಧಿಕಾರಿ ಎಂ.ಎ. ಖಾಲೀದ್ ಅವರಿಗೆ ಅಧ್ಯಯನ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಜವಾಬ್ದಾರಿಯನ್ನು ವಹಿಸಲಾಗಿದೆ.

ಕರ್ನಾಟಕ ಚಾಪ್ಟರ್‌ನ ಅಂಜುಮನ್ ತಾರಕ್ಕಿ ಉರ್ದು ಅಧ್ಯಕ್ಷ ಮೊಹಮ್ಮದ್ ಒಬೈದುಲ್ಲಾ ಷರೀಫ್, 'ಅಲ್ಪಸಂಖ್ಯಾತ ಸಮುದಾಯದ ಅನೇಕ ಮಕ್ಕಳು ಶಾಲೆಗಳಿಂದ ಹೊರಗುಳಿದಿರುವುದರಿಂದ ಸಮೀಕ್ಷೆಯ ಅಗತ್ಯ ತಿಳಿಯಿತು ಮತ್ತು ಕೋವಿಡ್-19ರ ನಂತರ ಇದರ ಸಂಖ್ಯೆಯು ಮತ್ತಷ್ಟು ಕ್ಷೀಣಿಸುತ್ತಿದೆ. ಕಳಪೆ ಮೂಲಸೌಕರ್ಯ ಮತ್ತು ಉರ್ದು ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆಯಿದೆ ಎಂಬ ಪೂರ್ವಭಾವಿ ಕಲ್ಪನೆಯಿಂದಾಗಿ ಮಕ್ಕಳು ಶಾಲೆ ಬಿಡುವಲ್ಲಿನ ಕೆಲವು ಕಾರಣಗಳಾಗಿವೆ ಎಂಬುದನ್ನು ಸಮಿತಿಯು ನಂಬುತ್ತದೆ ಎಂದರು.

ಸಮೀಕ್ಷೆಯ ಫಲಿತಾಂಶಗಳನ್ನು ಆಧರಿಸಿ, ಉರ್ದು ಶಾಲೆಗಳಲ್ಲಿನ ನ್ಯೂನತೆಗಳನ್ನು ನಿವಾರಿಸಲು ವರದಿಯನ್ನು ಸರ್ಕಾರದೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳನ್ನು ಉರ್ದು ಶಾಲೆಗಳಿಗೆ ಮರಳಿ ಕರೆತರಲು ಎನ್‌ಜಿಒಗಳು, ಮಸೀದಿ ಸಮಿತಿಗಳು ಮತ್ತು ಸಮುದಾಯದ ವಿದ್ಯಾವಂತ ಯುವಕರು ಶಾಲೆಗಳ ಮೂಲಸೌಕರ್ಯಗಳನ್ನು ಸುಧಾರಿಸಲು, ಬಡ ಕುಟುಂಬಗಳಿಗೆ ಪಡಿತರ ವಿತರಿಸಲು ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಸಮವಸ್ತ್ರಗಳನ್ನು ನೀಡಲು ಕೆಲಸ ಮಾಡುತ್ತಿದ್ದಾರೆ ಎಂದು ಷರೀಫ್ ಹೇಳಿದರು.

'ನಮ್ಮ ಆರಂಭಿಕ ಅಧ್ಯಯನಗಳ ಪ್ರಕಾರ, ಸಮುದಾಯದ ಸುಮಾರು 15 ಲಕ್ಷ ಮಕ್ಕಳು ವಾರ್ಷಿಕವಾಗಿ ಶಾಲೆಗಳಿಗೆ ದಾಖಲಾಗುತ್ತಾರೆ. ಆದರೆ, ಅವರು 7ನೇ ತರಗತಿ ತಲುಪುವ ವೇಳೆಗೆ, ಅವರಲ್ಲಿ ಸುಮಾರು ಶೇ 50 ರಷ್ಟು ಮಕ್ಕಳು ಶಾಲೆಗಳನ್ನು ತೊರೆಯುತ್ತಾರೆ' ಎಂದು ತಿಳಿಸಿದರು.

ಟಿಎನ್ಐಇ ಜೊತೆಗೆ ಮಾತನಾಡಿದ ಸಮಿತಿ ಸದಸ್ಯ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅದೋನಿ ಸಲೀಂ, 'ನಾವು ನಾಲ್ಕು ಕಂದಾಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೀದರ್, ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ಪ್ರಾಯೋಗಿಕ ಅಧ್ಯಯನವನ್ನು ಕೈಗೊಂಡಿದ್ದೇವೆ. ವರದಿಯಲ್ಲಿ, ಉರ್ದು ಶಾಲೆಗಳ ಸ್ಥಿತಿಗತಿ ಮತ್ತು ವಿದ್ಯಾರ್ಥಿಗಳ ಕುಟುಂಬದ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳು, ಶಾಲೆ ಬಿಡುವುದು ಸೇರಿದಂತೆ ಇತರ ವಿಷಯಗಳನ್ನು ಸೇರಿಸಲಾಗುತ್ತದೆ. ನಂತರ ಈ ವರದಿಯನ್ನು ಶಾಲಾ ಶಿಕ್ಷಣ ಇಲಾಖೆಗೆ ಸಲ್ಲಿಸಲಾಗುತ್ತದೆ' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ