ಶನಿವಾರ ಯಶವಂತಪುರ ನಿವಾಸಿಗಳ ಕುಂದುಕೊರತೆ ಆಲಿಸುವ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅವರೊಂದಿಗೆ ವೇದಿಕೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. 
ರಾಜ್ಯ

ಬೆಂಗಳೂರು: ಒಂದೇ ವೇದಿಕೆ ಹಂಚಿಕೊಂಡ ಡಿಕೆ ಶಿವಕುಮಾರ್, ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ 

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಶನಿವಾರ ಮತ್ತೊಮ್ಮೆ ಒಂದೇ ವೇದಿಕೆ ಹಂಚಿಕೊಂಡು ಯಶವಂತಪುರ ಕ್ಷೇತ್ರದ ಅಪಾರ್ಟ್‌ಮೆಂಟ್ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. 

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಶನಿವಾರ ಮತ್ತೊಮ್ಮೆ ಒಂದೇ ವೇದಿಕೆ ಹಂಚಿಕೊಂಡು ಯಶವಂತಪುರ ಕ್ಷೇತ್ರದ ಅಪಾರ್ಟ್‌ಮೆಂಟ್ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. 

ಹೆಮ್ಮಿಗೆಪುರ ನಿವಾಸಿಗಳ ಅಹವಾಲು ಆಲಿಸಿದ ಶಿವಕುಮಾರ್, ಮೊದಲು ತಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಸೋಮಶೇಖರ್‌ ಕೇಳಿಕೊಂಡಿದ್ದಾರೆ. ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಿ ಅಧಿಕಾರಿಗಳನ್ನು ಕರೆತಂದಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಆಲಿಸುತ್ತೇನೆ' ಎಂದರು.

'ಸೂಕ್ತ ರಸ್ತೆ, ಸುಗಮ ಸಂಚಾರ, ಕಸ ವಿಲೇವಾರಿ ಹಾಗೂ ಸರ್ಕಾರಿ ಆಸ್ಪತ್ರೆ ಸೇರಿದಂತೆ ಇನ್ನಿತರ ವ್ಯವಸ್ಥೆ ಕಲ್ಪಿಸುವಂತೆ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು. 

'ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಈ ಕೆಲಸವನ್ನು ಮೊದಲು ಮಾಡುವುದಾಗಿ ಭರವಸೆ ನೀಡಿದ್ದಾರೆ. ನೀರು ಸರಬರಾಜು ಮತ್ತು ನಿಗಮ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಬಂದಿದ್ದು, ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಾರೆ’ ಎಂದು ಶಿವಕುಮಾರ್ ಹೇಳಿದರು.

ಉತ್ತರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳು ಮತ್ತು ಸಮುದಾಯಗಳು ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವ ಮೂಲಕ ಜವಾಬ್ದಾರಿಯಿಂದಿರುವುದನ್ನು ಡಿಸಿಎಂ ಶ್ಲಾಘಿಸಿದರು. ಬನಶಂಕರಿ 6ನೇ ಹಂತದ ನಿವಾಸಿಗಳು ಆ ಪ್ರದೇಶದಲ್ಲಿ ಹಸಿ ತ್ಯಾಜ್ಯ ಸಂಸ್ಕರಣಾ ಘಟಕದ ಬಗ್ಗೆ ದೂರು ನೀಡಿದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಸೋಮಶೇಖರ್ ಜೊತೆಗಿನ ಸಂಬಂಧದ ಕುರಿತು ಮಾತನಾಡಿದ ಶಿವಕುಮಾರ್, ನಮ್ಮ ಸ್ನೇಹ 35 ವರ್ಷಗಳಷ್ಟು ಹಳೆಯದು. ಅದು ಈಗ ಫಲ ನೀಡಿದೆ. ಹಣ್ಣುಗಳನ್ನು ಕಿತ್ತು ತಿನ್ನಲು ಬೇರೆಯವರಿಗೆ ಬಿಡಬಾರದು ಎಂಬ ಭಾವನೆ ಬಂದಿದೆ ಎಂದರು.

'ನನಗೆ ಕನಕಪುರಕ್ಕೆ ಹೋಗಲು ಸಾಧ್ಯವಾಗಿಲ್ಲ. ಆದರೆ, ಸೋಮಶೇಖರ್ ನನ್ನನ್ನು ಎರಡು ಬಾರಿ ನಿಮ್ಮ ಏರಿಯಾಕ್ಕೆ ಕರೆತಂದಿದ್ದಾರೆ. ನಿಮ್ಮ ಸಮಸ್ಯೆಯ ಬಗ್ಗೆ ನಮಗೂ ಕಾಳಜಿ ಇದೆ. ಈ ಚುನಾವಣೆಯಲ್ಲಿ ನೀವು ಕಾಂಗ್ರೆಸ್‌ಗೆ ಬೆಂಬಲ ನೀಡಿಲ್ಲ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT