ಇಂಡಿಗೋ ವಿಮಾನ 
ರಾಜ್ಯ

ಅಕ್ಟೋಬರ್ 5 ರಿಂದ ಬೆಳಗಾವಿಯಿಂದ ದೆಹಲಿಗೆ ಇಂಡಿಗೋ ವಿಮಾನ ಸೇವೆ ಆರಂಭ

ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದರೂ ಕೂಡ ಹಲವಾರು ಕಾರಣಗಳಿಂದಾಗಿ, ಕಳೆದ ಕೆಲವು ವರ್ಷಗಳಿಂದ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವಾರು ಪ್ರಮುಖ ಸ್ಥಳಗಳಿಗೆ ತೆರಳುವ ವಿಮಾನ ಸೇವೆಗಳು ಸ್ಥಗಿತಗೊಂಡಿವೆ.

ಬೆಳಗಾವಿ: ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದರೂ ಕೂಡ ಹಲವಾರು ಕಾರಣಗಳಿಂದಾಗಿ, ಕಳೆದ ಕೆಲವು ವರ್ಷಗಳಿಂದ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವಾರು ಪ್ರಮುಖ ಸ್ಥಳಗಳಿಗೆ ತೆರಳುವ ವಿಮಾನ ಸೇವೆಗಳು ಸ್ಥಗಿತಗೊಂಡಿವೆ. 

ಆದರೆ, ಕೆಲವು ತಿಂಗಳ ಹಿಂದೆ ಬೆಳಗಾವಿ ಮತ್ತು ದೆಹಲಿ ನಡುವಿನ ವಿಮಾನಗಳನ್ನು ಸ್ಥಗಿತಗೊಳಿಸಿದ್ದರಿಂದ ರಾಷ್ಟ್ರ ರಾಜಧಾನಿಗೆ ತೆರಳುವ ಹೆಚ್ಚಿನ ಸಂಖ್ಯೆಯ ವಿಮಾನ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು. ಇದೀಗ ಬೆಳಗಾವಿ ಮತ್ತು ದೆಹಲಿ ನಡುವಿನ ದೈನಂದಿನ ವಿಮಾನಗಳು ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿವೆ.

ಮೂಲಗಳ ಪ್ರಕಾರ, ಬೆಳಗಾವಿ-ದೆಹಲಿ ವಿಮಾನಗಳ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಇಂಡಿಗೋ ಏರ್‌ಲೈನ್ಸ್ ಎರಡು ನಗರಗಳ ನಡುವೆ ವಿಮಾನ ಸೇವೆಗಳನ್ನು ಆರಂಭಿಸಲಿದೆ. ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ ಮಧ್ಯಾಹ್ನ 3.45ಕ್ಕೆ ಟೇಕ್ ಆಫ್ ಆಗಲಿದ್ದು, 6.05ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35ಕ್ಕೆ ಟೇಕಾಫ್ ಆಗಿ ದೆಹಲಿಯನ್ನು ರಾತ್ರಿ 9 ಗಂಟೆಗೆ ತಲುಪಲಿದೆ.

ಹಲವಾರು ತಿಂಗಳುಗಳ ಹಿಂದೆ ಬಿಕ್ಕಟ್ಟಿನ ಪರಿಸ್ಥಿತಿಯಿಂದಾಗಿ ವಿಮಾನಯಾನ ಸಂಸ್ಥೆಗಳು ಹಠಾತ್ತನೆ ತಮ್ಮ ಸೇವೆಗಳನ್ನು ಸ್ಥಗಿತಗೊಳಿಸಿದ್ದವು. ಹೆಚ್ಚಿನ ಸಂಖ್ಯೆಯ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ರಕ್ಷಣಾ ಅಧಿಕಾರಿಗಳು ಮತ್ತು ರಾಜಕಾರಣಿಗಳು ಬೆಳಗಾವಿ-ದೆಹಲಿ ನಡುವಿನ ಹಿಂದಿನ ಸ್ಪೈಸ್‌ಜೆಟ್ ವಿಮಾನವನ್ನು ಅವಲಂಬಿಸಿದ್ದರು.

ಅಂದಿನಿಂದ, ಈ ಪ್ರದೇಶದ ಪ್ರಯಾಣಿಕರು ಗೋವಾ ಅಥವಾ ಬೆಂಗಳೂರಿನಂತಹ ವಿಮಾನ ನಿಲ್ದಾಣಗಳಿಂದ ದೆಹಲಿ ಸಂಪರ್ಕಿಸುವ ವಿಮಾನಗಳನ್ನು ಹಿಡಿಯುವಂತಾಗಿತ್ತು. ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಂದ ಸೇವೆ ಒದಗಿಸುತ್ತಿದ್ದ ಹೆಚ್ಚಿನ ವಿಮಾನಗಳು ಉತ್ತಮ ಪ್ರತಿಕ್ರಿಯೆ ಪಡೆದಿವೆ. ವಿಶೇಷವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹಲವಾರು ಪ್ರಮುಖ ನಗರಗಳಿಗೆ ವಿಮಾನಗಳನ್ನು ಪರಿಚಯಿಸಿದ ನಂತರ ವ್ಯಾಪಕ ಪ್ರತಿಕ್ರಿಯೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT