ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಎಂಟು ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ; ಸರಣಿ ಅಪಘಾತದಲ್ಲಿ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಲಾರಿಯೊಂದು ಎಂಟು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ್ ನಗರದಲ್ಲಿ ಈ ಘಟನೆ ನಡೆದಿದೆ

ಬೆಂಗಳೂರು: ಲಾರಿಯೊಂದು ಎಂಟು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶುಕ್ರವಾರ ರಾತ್ರಿ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ್ ನಗರದಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ಹಾಸನ ಮೂಲದ ಯಲಹಂಕ ನಿವಾಸಿ ನೇಮರಾಜ್ (37) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ನೇಮರಾಜ್ ಮದುವೆಯಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಅಪಘಾತದಲ್ಲಿ ಗಾಯಗೊಂಡಿರುವವರನ್ನು ಮುತ್ತುರಾಜ್ ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.

ಹಿಂದೂಪುರದಿಂದ ಕೆಆರ್ ಪುರಂ ಕಡೆಗೆ ಬರುತ್ತಿದ್ದ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ತುಂಬಿಕೊಂಡಿದ್ದ ಲಾರಿಯೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಐದು ಕಾರು, ಎರಡು ಲಾರಿ ಹಾಗೂ ಬೈಕ್ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಘಟನೆಯಲ್ಲಿ ಬೈಕ್ ಸವಾರ ನೇಮರಾಜ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದು, ಕಾರಿನಲ್ಲಿದ್ದ ಮುತ್ತುರಾಜ್ ಮತ್ತು ರಾಜೇಶ್ ಗಾಯಗೊಂಡಿದ್ದಾರೆ.

ಆರೋಪಿ ಲಾರಿ ಚಾಲಕ ಚಂದ್ರಶೇಖರ್ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದ್ದು, ಆತನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT