ಕೆಎಸ್ ಆರ್ ಟಿಸಿ ಬಸ್ ಗಳ ಸಾಂದರ್ಭಿಕ ಚಿತ್ರ 
ರಾಜ್ಯ

ಮುಂದಿನ ತಿಂಗಳಿಂದ ಕೆಎಸ್ ಆರ್ ಟಿಸಿ ಕಾರ್ಗೋ ಸೇವೆ ಆರಂಭ ಸಾಧ್ಯತೆ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ರಾಜ್ಯ ರಸ್ತೆ ನಿಗಮ ಆದಾಯವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಗೋ ಸೇವೆ ಆರಂಭಿಸಲು ಮುಂದಾಗಿದೆ. ಮುಂದಿನ ತಿಂಗಳು ಈ ಯೋಜನೆ ಜಾರಿಗೆ ಬರುವ ಸಾಧ್ಯತೆಯಿದೆ.

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ರಾಜ್ಯ ರಸ್ತೆ ನಿಗಮ ಆದಾಯವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಗೋ ಸೇವೆ ಆರಂಭಿಸಲು ಮುಂದಾಗಿದೆ. ಮುಂದಿನ ತಿಂಗಳು ಈ ಯೋಜನೆ ಜಾರಿಗೆ ಬರುವ ಸಾಧ್ಯತೆಯಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  ಬಿಜೆಪಿ ಅವಧಿಯಲ್ಲಿ ನಷ್ಟದ ಕೂಪಕ್ಕೆ ಬಿದ್ದಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ "ಶಕ್ತಿ" ನೀಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ KSRTC ಲಾರಿಗಳು ರಸ್ತೆಗೆ ಇಳಿಯಲಿವೆ, ಲಗೇಜ್ ಗಳನ್ನು ರಾಜ್ಯಾದ್ಯಂತ ಸಾಗಣೆ ಮಾಡಲು ಕೆಎಸ್ ಆರ್ ಟಿಸಿ ಲಾಜಿಸ್ಟಿಕ್ಸ್ ವ್ಯವಹಾರಕ್ಕೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಲಿದೆ. ಸರ್ಕಾರಿ ಸಂಸ್ಥೆಗಳನ್ನು ಲಾಭದ ಹಂತಕ್ಕೆ ಕೊಂಡೊಯ್ಯುವ ಇಚ್ಛಾಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ಹೇಳಿದೆ. 

ಈ ನಿಟ್ಟಿನಲ್ಲಿ ಸದ್ಯ ತನ್ನ ವ್ಯಾಪ್ತಿಯಲ್ಲಿ ಲಾರಿಗಳ ಬಳಕೆಗೆ ನಿಗಮ ತಯಾರಿ ನಡೆಸಿದ್ದು, ಇನ್ನು ಮುಂದೆ ಲಾರಿಗಳ ಮೂಲಕ ಲಗೇಜ್‌ಗಳನ್ನು ರಾಜ್ಯವ್ಯಾಪಿ ಸಾಗಣೆ ಮಾಡಲು ಚಿಂತನೆ ನಡೆಸಿದೆ.  ಪಾರ್ಸೆಲ್ ಮತ್ತು ಕೊರಿಯರ್ ಸೇವೆಗಳನ್ನು ಒದಗಿಸುವ ನಮ್ಮ ಕಾರ್ಗೋ ವಿಭಾಗಕ್ಕೆ 6 ಟನ್ ಸಾಮರ್ಥ್ಯದ 10 ಟ್ರಕ್ ಗಳ ಸೇರ್ಪಡೆಗೊಳಿಸಲು ಕೆಎಸ್ಆರ್'ಟಿಸಿ ಮುಂದಾಗಿದೆ. ಇದರೊಂದಿಗೆ ನಮ್ಮ ಕಾರ್ಗೋ ಸೇವೆಯನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಸಾರಿಗೆ ನಿಗಮ ಹೊಂದಿದೆ.

ಕೆಎಸ್‌ಆರ್‌ಟಿಸಿ ಲಾರಿಗೆ ಬಸ್ ಚಾಲಕರನ್ನೇ ಲಾರಿ ಚಾಲಕರನ್ನಾಗಿ ಮಾಡುವ ಸಾಧ್ಯತೆಯಿದೆ. ನಿಗಮದ ನಿಲ್ದಾಣಗಳಿಗೆ ಬಂದು ಬೀಳುವ ಪಾರ್ಸೆಲ್‌ಗಳನ್ನು ಸ್ಥಳೀಯ ಸಿಬ್ಬಂದಿ ಮೂಲಕ ಪೋರ್ಟರ್ ಮಾದರಿಯಲ್ಲಿ ಆಯಾ ಮನೆಗಳಿಗೆ ತಲುಪಿಸಲಿದ್ದು, ಅದಕ್ಕೆ ಪ್ರತ್ಯೇಕ ಶುಲ್ಕ ವಿಧಿಸುವ ಸಾಧ್ಯೆಯೂ ಇದೆ. ಮುಂದಿನ ತಿಂಗಳು ರಾಜ್ಯದೊಳಗಷ್ಟೇ ಸೇವೆ ನೀಡಲು ಕೆಎಸ್‌ಆರ್‌ಟಿಸಿ ಚಿಂತನೆ ನಡೆಸಿದೆ. ನಂತರದ ದಿನಗಳಲ್ಲಿ ರಾಜ್ಯದೊಳಗೆ ಯಶಸ್ವಿಯಾದರೆ ಹೊರರಾಜ್ಯಗಳಿಗೂ ಸೇವೆ ವಿಸ್ತರಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ; ಡಿಸಿಎಂ ಹೇಳಿದ್ದೇನು? Video

ಬೆಂಗಳೂರು: ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

ಮಾದಕ ವಸ್ತು ತಡೆ: ನಿರ್ಲಕ್ಷ್ಯಕ್ಕಾಗಿ ಮೂವರು ಇನ್ಸ್‌ಪೆಕ್ಟರ್‌ಗಳ ಅಮಾನತು

ಲಂಕಾ ಹನಿಮೂನ್ ನಲ್ಲಿ 'ಹಳೇ ಲವರ್' ವಿಚಾರಕ್ಕೆ ಜಗಳ! ನವದಂಪತಿ ಸೂಸೈಡ್ ಗೆ ಇದೇ ಕಾರಣನಾ? ಕಣ್ಣೀರಿನಲ್ಲಿ ಮುಳುಗಿದ ಕುಟುಂಬ!

SCROLL FOR NEXT