ಸಿಎಂ ಸಿದ್ದರಾಮಯ್ಯ 
ರಾಜ್ಯ

ಜನ ನಮ್ಮ ಮಾಲೀಕರು, ನಾವು ಸೇವಕರು; ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಖಾತೆ, ಪೋಡಿ ಮಾಡಿಸಿ ಅಂತಾ ಜನ ನನ್ನ ಬಳಿ ಬರುತ್ತಿದ್ದಾರೆ. ಅಧಿಕಾರಿಗಳು ಜನರ ಕೆಲಸ ಮಾಡಿದರೆ ಸಿಎಂ ಬಳಿ ಏಕೆ ಬರುತ್ತಾರೆ? ಜನ ಸಣ್ಣಪುಟ್ಟ ಸಮಸ್ಯೆಗಳಿಗೆ ನನ್ನ ಮನೆ ಬಾಗಿಲಿಗೆ ಬರಬೇಕಾ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮೈಸೂರು: ಖಾತೆ, ಪೋಡಿ ಮಾಡಿಸಿ ಅಂತಾ ಜನ ನನ್ನ ಬಳಿ ಬರುತ್ತಿದ್ದಾರೆ. ಅಧಿಕಾರಿಗಳು ಜನರ ಕೆಲಸ ಮಾಡಿದರೆ ಸಿಎಂ ಬಳಿ ಏಕೆ ಬರುತ್ತಾರೆ? ಜನ ಸಣ್ಣಪುಟ್ಟ ಸಮಸ್ಯೆಗಳಿಗೆ ನನ್ನ ಮನೆ ಬಾಗಿಲಿಗೆ ಬರಬೇಕಾ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಇಂದು ಮೈಸೂರಿನಲ್ಲಿ ಸತತ 8 ಗಂಟೆಗಳ ಕಾಲ ಕೆಡಿಪಿ ಸಭೆ ನಡೆಸಿದ ಸಿಎಂ, ಕೊನೆಯಲ್ಲಿ ಅಧಿಕಾರಿಗಳ ವಿರುದ್ಧ ಫುಲ್ ಗರಂ ಆದರು. ಅಧಿಕಾರಿಗಳು ಜನರ ಕೆಲಸ ಮಾಡಲು ನೆಪ ಹೇಳುತ್ತಿದ್ದಾರೆ. ಜಾತಿ ಪ್ರಮಾಣಪತ್ರ ಪಡೆಯಲು ನೂರೆಂಟು ಸಲ ಅಲೆಯಬೇಕಾ? ಎಲ್ಲಾ ಸೌಲಭ್ಯ ಪಡೆದರೂ ಜನರ ಕೆಲಸ ಏಕೆ ಮಾಡುತ್ತಿಲ್ಲ? ಜನ ನಮ್ಮ ಮಾಲೀಕರು, ಅಧಿಕಾರಿಗಳು, ಜನಪ್ರತಿನಿಧಿಗಳಲ್ಲ. ನಾವು ಸೇವಕರು ಮಾತ್ರ. ಜನರ ಹಣದಲ್ಲಿ ನಿಮಗೆ, ನಮಗೆ ಎಲ್ಲಾ ರೀತಿಯ ಸವಲತ್ತುಗಳು ಸಿಗುತ್ತಿವೆ. ಹೀಗಾಗಿ, ಜನರನ್ನು ಸಣ್ಣ ಪುಟ್ಟ ಕೆಲಸಕ್ಕೆ ಸರ್ಕಾರಿ ಕಚೇರಿಗಳಿಗೆ ಅಲೆಸದಂತೆ ಕೆಲಸ ಮಾಡಬೇಕು ಎಂದು ಆದೇಶಿಸಿದರು.

ನಿಯಮ ಬದ್ದವಾಗಿ, ಕಾಲ ಮಿತಿಯಲ್ಲಿ ಕೆಲಸ ಮಾಡದಿದ್ದರೆ ಅದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಯಾವ ನಿರೀಕ್ಷೆ ಇಟ್ಟುಕೊಂಡು ಸರ್ಕಾರವನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಿ. ಮೈಸೂರು ಜಿಲ್ಲೆ ಶಿಕ್ಷಣ ಸೂಚ್ಯಂಕದಲ್ಲಿ 16ನೇ ಸ್ಥಾನದಲ್ಲಿದೆ ಎಂದರೆ ನಾಚಿಕೆಗೇಡು. ಇದನ್ನು ನಾನು ಸಹಿಸಲ್ಲ. ಶಿಕ್ಷಣ, ಆರೋಗ್ಯ ಸೂಚ್ಯಂಕ ಸೇರಿ ಎಲ್ಲಾ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮೈಸೂರು ಮಾದರಿ ಜಿಲ್ಲೆಯಾಗಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಾನು ಕೆಡಿಪಿ ಸಭೆ ಕರೆದರೆ ರಾಜ್ಯ ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಬೇಕು. ಸಭೆ ಹಾಜರಾಗುವಂತೆ ನೋಟಿಸ್ ಬಂದರೂ ಸಭೆಗೆ ಗೈರಾದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಈ ವಿಚಾರದಲ್ಲಿ ಅಧಿಕಾರಿಗಳು ರಾಜಕೀಯ ಮಾಡಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!