ರೈತರ ಪ್ರತಿಭಟನೆ 
ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ!

ತಮಿಳುನಾಡಿಗೆ ಸೆಪ್ಟೆಂಬರ್ 2ರಿಂದ ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮಧ್ಯಂತರ ಆದೇಶ ನೀಡಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದರು.ಾ

ಮಂಡ್ಯ: ತಮಿಳುನಾಡಿಗೆ ಸೆಪ್ಟೆಂಬರ್ 2ರಿಂದ ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮಧ್ಯಂತರ ಆದೇಶ ನೀಡಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆಯ ಮುಖ್ಯ ದ್ವಾರದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ರೈತರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಇಂದು ಸರ್ಕಾರದ ವಿರುದ್ಧ ಧರಣಿ ನಡೆಸಿದರು. ರಾಜ್ಯದಲ್ಲಿನ ನೀರಿನ ಅಭಾವವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದ ರೈತರು ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು. ರಾಜ್ಯ ಸರಕಾರಕ್ಕೆ ಇಲ್ಲಿನ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದರು.

ಕೈಗಾರಿಕೆ ಇಲಾಖೆ ಸಚಿವ ಎಂ.ಬಿ ಪಾಟೀಲ್ ಎಎನ್‌ಐಗೆ ಹೇಳಿಕೆ ನೀಡಿದ್ದು, ಸಮಿತಿಯ ಆದೇಶವನ್ನು ಜಾರಿಗೊಳಿಸುವುದು ರಾಜ್ಯಕ್ಕೆ ತುಂಬಾ ಕಷ್ಟಕರವಾಗಿದೆ. ನಮ್ಮಲ್ಲಿ ನೀರಿಲ್ಲ. ಸಮಿತಿ ಆದೇಶ ಜಾರಿ ಮಾಡುವುದು ತುಂಬಾ ಕಷ್ಟ. ಹಾಗಾಗಿ ನಾವು ಕಾನೂನು ಮಾರ್ಗ ಹಿಡಿದಿದ್ದೇವೆ. ಹೀಗಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಎತ್ತಲಿದ್ದೇವೆ ಎಂದರು.

ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ನೀರಿನ ಲಭ್ಯತೆ ಕುರಿತಂತೆ ಸಮಿತಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದರು.

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದು ರಾಜ್ಯದ ಹಿತಾಸಕ್ತಿಗಳನ್ನು ಕಾಪಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ವಿಚಾರಣೆ ಮುಗಿಯಲಿ, ನಮ್ಮ ವಾದ ಮಂಡಿಸಿ ರಾಜ್ಯದ ಹಿತ ಕಾಪಾಡುತ್ತೇವೆ. ಸುಪ್ರೀಂಕೋರ್ಟ್ ನಿಂದ ತೀರ್ಪು ಬರಲಿ, ನಂತರ ನಾನು ಪ್ರತಿಕ್ರಿಯಿಸುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT