ಸಂಗ್ರಹ ಚಿತ್ರ 
ರಾಜ್ಯ

ಲಂಚ ಪ್ರಕರಣ: ಪೊಲೀಸ್ ಅಧಿಕಾರಿ ಖುಲಾಸೆಗೊಳಿಸಿದ ನ್ಯಾಯಾಲಯ

ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಅಕ್ರಮ ಆಸ್ತಿ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಬಿ ರಾಮಕೃಷ್ಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಬೆಂಗಳೂರು: ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಅಕ್ರಮ ಆಸ್ತಿ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಬಿ ರಾಮಕೃಷ್ಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

2019ರ ಫೆ.18ರಂದು ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30 ಲಕ್ಷ ರೂ. ದಂಡವನ್ನು ವಿಧಿಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಮಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಪುರಸ್ಕರಿಸಿದರು.

ವಿಚಾರಣೆ ವೇಳೆ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ತಳ್ಳಿಹಾಕಿದ ಹೈಕೋರ್ಟ್, ಮೇಲ್ಮನವಿದಾರರ ಆದಾಯ 31.35 ಲಕ್ಷ ರೂ ಆಗಿದ್ದು, ಅವರ ಆಸ್ತಿ 20.44 ಲಕ್ಷ ರೂ ಆಗಿದೆ. ಆಸ್ತಿಗಿಂತಲೂ ಆದಾಯ ಹೆಚ್ಚಾಗಿದೆ. ಹೀಗಾಗಿ ಇಲ್ಲಿ ಅಕ್ರಮ ಆಸ್ತಿಗಳು ಪತ್ತೆಯಾಗಿಲ್ಲ. ಪ್ರಕರಣ ಸಂಬಂಧ ಇಲಾಖಾ ವಿಚಾರಣೆಯಲ್ಲಿ ಆರೋಪಿಯನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!