ಸಂಗ್ರಹ ಚಿತ್ರ 
ರಾಜ್ಯ

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಜಮೀರ್ ಅಹಮದ್ ಖಾನ್

ಮದರಸಾಗಳಲ್ಲಿ ವಿಜ್ಞಾನ, ಗಣಿತ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಎಲ್ಲಾ ವಿಷಯಗಳನ್ನು ಬೋಧಿಸುವುದನ್ನು ಖಚಿತಪಡಿಸಬೇಕೆಂದು ಅಧಿಕಾರಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು: ಮದರಸಾಗಳಲ್ಲಿ ವಿಜ್ಞಾನ, ಗಣಿತ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಎಲ್ಲಾ ವಿಷಯಗಳನ್ನು ಬೋಧಿಸುವುದನ್ನು ಖಚಿತಪಡಿಸಬೇಕೆಂದು ಅಧಿಕಾರಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸೂಚನೆ ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಸೋಮವಾರ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸಬೇಕು ಎಂದು ಸೂಚನೆ ನೀಡಿದರು.

ವಕ್ಫ್ ಬೋರ್ಡ್‌ನಲ್ಲಿ 1,265 ಮದರಸಾಗಳು ನೋಂದಣಿಯಾಗಿದ್ದು, ಅಧಿಕಾರಿಗಳು 100 ಮದರಸಾಗಳಲ್ಲಿ 5,000 ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ ಕನ್ನಡವನ್ನು ಬೋಧನೆ ಮಾಡಬೇಕು. ಮುಂದಿನ ವರ್ಷದಿಂದ ರಾಜ್ಯದಾದ್ಯಂತ ಎಲ್ಲಾ ಮದರಸಾಗಳಿಗೆ ಬೋಧನೆಯನ್ನು ಪ್ರಾರಂಭಿಸಬೇಕು. ಈ ಕುರಿತು ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಸೂಚಿಸಿದರು.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಯೋಜನೆಯಡಿ ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 20 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು 30 ಲಕ್ಷ ರೂ.ಗೆ ಹೆಚ್ಚಿಸಲು ಮತ್ತು ಐಐಟಿ, ಎನ್‌ಐಟಿ ಸೇರಿದಂತೆ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು ರೂ 2 ಲಕ್ಷದಿಂದ ರೂ 4 ಲಕ್ಷ ಹೆಚ್ಚಿಸುವಂತೆಯೂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!