ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ಮತ್ತೊಮ್ಮೆ ನೋಟಿಸ್ ಜಾರಿಗೆ ಪೊಲೀಸರು ಮುಂದು!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪ್ರಕರಣ ಸಂಬಂಧ ಪ್ರಹ್ಲಾದ್ ಅವರಿಗೆ ಆಗಸ್ಟ್ 12 ರಂದು ಹಲಸೂರು ಗೇಟ್ ಪೊಲೀಸರು ಮೊದಲ ನೋಟಿಸ್ ಜಾರಿ ಮಾಡಿದ್ದರು. ಆದರೆ, ಇಲ್ಲಿಯವರೆಗೆ ವಿಚಾರಣೆಗಾಗಿ ಹಾಜರಾಗಿಲ್ಲ. ಹೀಗಾಗಿ ಮತ್ತೊಮ್ಮೆ ನೋಟಿಸ್ ಜಾರಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಧಿಕಾರಿಯೊಬ್ಬರು ಮಾತನಾಡಿ, ಅಗ್ನಿ ಅವಘಡ ಘಟನೆಯ ತನಿಖೆಯ ಜವಾಬ್ದಾರಿಯನ್ನು ಪ್ರಹ್ಲಾದ್ ಅವರಿಗೆ  ನೀಡಲಾಗಿದೆ. ಇದರಂತ ತನಿಖೆ ಸಂಬಂಧ ದಾಖಲೆಗಳ ಸಂಗ್ರಹ ಹಾಗೂ ನಿಯಮ ಉಲ್ಲಂಘನೆಗಳ ಕುರಿತು ಮಾಹಿತಿ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವ್ಯಕ್ತಿಯೊಬ್ಬರಿಗೆ ಪೊಲೀಸರ ಮುಂದೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಎರಡನೇ ನೋಟೀಸ್ ನಂತರವೂ ಅಧಿಕಾರಿ ಹಾಜರಾಗದಿದ್ದರೆ, ಅಧಿಕಾರಿಯು ಅಸಹಕಾರ ತೋರುತ್ತಿದ್ದು, ತನಿಖೆಗೆ ಹಾಜರಾಗಲಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗುತ್ತದೆ. ನಂತರ ಅವರು ನ್ಯಾಯಾಲಯಕ್ಕೆ ಉತ್ತರಿಸಬೇಕಾಗುತ್ತದೆ. ಘಟನೆಯಲ್ಲಿ ಅಧಿಕಾರಿ ಆರೋಪಿ ಸ್ಥಾನದಲ್ಲಿಲ್ಲ. ಹೀಗಾಗಿ ಅವರನ್ನು ಬಂಧಿಸಲು ಸಾಧ್ಯವಿಲ್ಲ ತಿಳಿಸಿದ್ದಾರೆ.

ಈ ನಡುವೆ ನೋಟಿಸ್ ಸಂಬಂಧ ಪ್ರತಿಕ್ರಿಯೆ ಪಡೆಯಲು ಪ್ರಹ್ಲಾದ್ ಅವರನ್ನು ಸಂಪರ್ಕಿಸಲಾಯಿತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಏತನ್ಮಧ್ಯೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ತೀವ್ರವಾಗಿ ಗಾಯಗೊಂಡಿರುವ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ (ಕ್ಯೂಎಎಲ್) ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯವನ್ನು ವಿಚಾರಿಸಿದರು. ನಂತರ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಈಗಲೂ ಶಿವಕುಮಾರ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel