ಅರಮನೆ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ, ನಿನ್ನೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ನಡೆಯುವ ವೇದಿಕೆ ಬಳಿ ಬಂದು ಪರಿಶೀಲಿಸಿದರು 
ರಾಜ್ಯ

ಅರಮನೆ ನಗರಿ ಮೈಸೂರಿನಲ್ಲಿ 'ಗೃಹಲಕ್ಷ್ಮಿ'ಯೋಜನೆ ಚಾಲನೆಗೆ ಕ್ಷಣಗಣನೆ: ರಾರಾಜಿಸುತ್ತಿವೆ ಕಾಂಗ್ರೆಸ್ ನಾಯಕರ ಕಟೌಟ್, ಬ್ಯಾನರ್

ಕಾಂಗ್ರೆಸ್ ಸರ್ಕಾರವು ರಾಜ್ಯದ 1.10 ಕೋಟಿ ಮಹಿಳೆಯರಿಗೆ ಮಾಸಿಕ ತಲಾ 2,000 ರೂಪಾಯಿ ಸಹಾಯಧನ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಇಂದು ಬುಧವಾರ ಮೈಸೂರಿನಲ್ಲಿ ಚಾಲನೆ ನೀಡಲಿದೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಭರವಸೆಗಳಲ್ಲಿ ‘ಗೃಹ ಲಕ್ಷ್ಮಿ’ ಅತ್ಯಂತ ಮುಖ್ಯವಾದದ್ದು.

ಮೈಸೂರು: ಕಾಂಗ್ರೆಸ್ ಸರ್ಕಾರವು ರಾಜ್ಯದ 1.10 ಕೋಟಿ ಮಹಿಳೆಯರಿಗೆ ಮಾಸಿಕ ತಲಾ 2,000 ರೂಪಾಯಿ ಸಹಾಯಧನ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಇಂದು ಬುಧವಾರ ಮೈಸೂರಿನಲ್ಲಿ ಚಾಲನೆ ನೀಡಲಿದೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಭರವಸೆಗಳಲ್ಲಿ ‘ಗೃಹ ಲಕ್ಷ್ಮಿ’ ಅತ್ಯಂತ ಮುಖ್ಯವಾದದ್ದು.

ಯೋಜನೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ವಿಶೇಷವಾಗಿದೆ. 

ನಿನ್ನೆ ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾರಣವಾದ ಕಾಂಗ್ರೆಸ್ ಘೋಷಿಸಿದ ನಾಲ್ಕನೇ ಭರವಸೆ ‘ಗೃಹ ಲಕ್ಷ್ಮಿ’ಗೆ ಚಾಲನೆ ನೀಡಲಿದ್ದಾರೆ. ಭರವಸೆಗಳನ್ನು ಜಾರಿಗೊಳಿಸಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕದಲ್ಲಿ ವಿರೋಧ ಪಕ್ಷಗಳು ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದವು. ಸರ್ಕಾರ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ರಾಜ್ಯದ ಜನತೆಗೆ ನೀಡಿದ್ದ ಭರವಸೆಗಳನ್ನು ಜಾರಿಗೊಳಿಸಿದೆ ಎಂದರು.

ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿಲ್ಲ ಎಂದ ಸಿದ್ದರಾಮಯ್ಯ, ಪಿಎಸ್‌ಐ ನೇಮಕಾತಿ, ಶೇ.40 ಕಮಿಷನ್ ಸೇರಿದಂತೆ ವಿವಿಧ ಹಗರಣಗಳ ಬಗ್ಗೆ ತನಿಖೆಗೆ ಆದೇಶಿಸಿದೆ, ಬಿಜೆಪಿಯ 4 ವರ್ಷಗಳ ಆಡಳಿತದ ಕರ್ಮಕಾಂಡ ಹೊರಬರಲಿದೆ ಎಂದರು. 

ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಅನುಕೂಲ: ಸರ್ವಶಕ್ತರು ಮತ್ತು ಸಾರ್ವಜನಿಕರ ಆಶೀರ್ವಾದದಿಂದ ರಾಜ್ಯದಲ್ಲಿ ಖಾತರಿಗಳನ್ನು ಜಾರಿಗೊಳಿಸಲು ಸರ್ಕಾರಕ್ಕೆ ಅವಕಾಶ ಸಿಕ್ಕಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ಗೃಹ ಲಕ್ಷ್ಮಿ ಯೋಜನೆಯಿಂದ 1.10 ಕೋಟಿ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಗೃಹ ಜ್ಯೋತಿ ಯೋಜನೆಯಿಂದ 1.41 ಲಕ್ಷ ಗ್ರಾಹಕರು ಪ್ರಯೋಜನ ಪಡೆದಿದ್ದಾರೆ ಮತ್ತು ಶಕ್ತಿ ಯೋಜನೆಯಡಿ 46 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 100 ದಿನಗಳಲ್ಲಿ 1.41 ಕೋಟಿ ಕುಟುಂಬಗಳು ಅನ್ನ ಭಾಗ್ಯ ಯೋಜನೆಯಿಂದ ಪ್ರಯೋಜನ ಪಡೆದಿವೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಕ್ಷಣಗಣನೆ: ಅರಮನೆ ನಗರಿ ಮೈಸೂರು ಗೃಹ ಲಕ್ಷ್ಮಿ ಯೋಜನೆ ಬಿಡುಗಡೆಗೆ ಸಜ್ಜಾಗಿದೆ. ನಗರದೆಲ್ಲೆಡೆ ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್‌ ನಾಯಕರ ಕಟೌಟ್‌ಗಳನ್ನು ಹಾಕಲಾಗಿದೆ. ಮೈಸೂರಿನ ರಾಜ ಬೀದಿಗಳಲ್ಲಿ ಕಾಂಗ್ರೆಸ್​ನ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ಮಹಾರಾಜ ಕಾಲೇಜು ಮೈದಾನದ ಮುಖ್ಯ ವೇದಿಕೆಯ ಹಿಂದೆ 104 ಅಡಿ ಅಗಲದ ಪರದೆ ನಿರ್ಮಿಸಲಾಗಿದೆ. ಈ ಸ್ಥಳದಲ್ಲಿ ಮೈಸೂರು ಮತ್ತು ಸಮೀಪದ ಕೊಡಗು, ಹಾಸನ, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ ಸುಮಾರು 1 ಲಕ್ಷ ಮಹಿಳೆಯರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳನ್ನು ಸ್ಥಳಕ್ಕೆ ಕರೆದೊಯ್ಯಲು ಸುಮಾರು 2,000 ಬಸ್‌ಗಳನ್ನು ಬಳಸಲಾಗುತ್ತಿದೆ.

ಇನ್ನು ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಕಾರ್ಯಕ್ರಮದ ರೂಪುರೇಷೆಗೆ ಕಳೆದೆರಡು ದಿನದಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ಯಕ್ರಮ ನಡೆಯುವ ವೇದಿಕೆಗೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇದಿಕೆಯಲ್ಲಿ ಒಂದು‌ ಲಕ್ಷ ಫಲಾನುಭವಿಗಳ ಜೊತೆ ರಾಜ್ಯದ ಪ್ರತಿ ಗ್ರಾ.ಪಂ ಕಚೇರಿ ಆವರಣದಲ್ಲಿ ಲೈವ್ ಮೂಲಕ ಕಾರ್ಯಕ್ರಮ ತೋರಿಸಲಾಗುತ್ತದೆ. 

ಕಾರ್ಯಕ್ರಮ ಮುಗಿದ ಮೇಲೆ ಫಲಾನುಭವಿಗಳ ಜೊತೆ ಕೂಡ ಸಂವಾದ ನಡೆಸಲು ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಅದರ ಡ್ರೈ ರನ್ ನಿನ್ನೆ ಮಾಡಲಾಯಿತು.

ಮಹಾರಾಜ ಕಾಲೇಜು ಮೈದಾನ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇಂದು ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧ ಹೇರಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಆಗಮಿಸುವ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ಸಂಚಾರ ನಿರ್ಬಂಧ ಹೇರಲಾಗಿದೆ. KSRTC ಬಸ್​ ಸೇರಿ ಎಲ್ಲಾ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್​​ಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT