ಸಾಂದರ್ಭಿಕ ಚಿತ್ರ 
ರಾಜ್ಯ

ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನ, ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ!

ಕೊಡಗಿನಲ್ಲಿ ಕೆಎಸ್‌ಆರ್‌ಟಿಸಿ ಇಲಾಖೆಯ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ ಮಾಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ಮಡಿಕೇರಿ ನಗರ ಪೊಲೀಸರು ದಾಖಲಿಸಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿಲ್ಲ.

ಮಡಿಕೇರಿ: ಕೊಡಗಿನಲ್ಲಿ ಕೆಎಸ್‌ಆರ್‌ಟಿಸಿ ಇಲಾಖೆಯ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ ಮಾಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ಮಡಿಕೇರಿ ನಗರ ಪೊಲೀಸರು ದಾಖಲಿಸಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿಲ್ಲ.

ಆತ್ಮಹತ್ಯೆಗೆ ಯತ್ನಿಸಿದ ನೌಕರನನ್ನು 24 ವರ್ಷದ ಅಭಿಷೇಕ್ ಎಂದು ತಿಳಿದುಬಂದಿದ್ದು ಕೆಎಸ್‌ಆರ್‌ಟಿಸಿ ಇಲಾಖೆಯಲ್ಲಿ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಭಿಷೇಕ್ ತನ್ನ ತಂದೆ ನಿಧನರಾದ ನಂತರ ಅನುಕಂಪದ ಆಧಾರದ ಮೇಲೆ ಕೆಎಸ್‌ಆರ್‌ಟಿಸಿಯಲ್ಲಿ ಹುದ್ದೆಯನ್ನು ಪಡೆದಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. 

ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗದಲ್ಲಿ ಅಭಿಷೇಕ್ ಆರು ತಿಂಗಳು ಸೇವೆ ಸಲ್ಲಿಸಿದ್ದು ನಂತರ 2.5 ವರ್ಷಗಳ ಹಿಂದೆ ಮಡಿಕೇರಿ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಅಭಿಷೇಕ್ ಗೆ ಕೆಲಸದ ಒತ್ತಡ ಜಾಸ್ತಿಯಾಗಿತ್ತು. ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋದ ವ್ಯವಸ್ಥಾಪಕಿ ಹಿರಿಯ ಅಧಿಕಾರಿ ಗೀತಾ ಅವರು ಅಭಿಷೇಕ್ ನನ್ನು ಟಾರ್ಗೆಟ್ ಮಾಡಿ ಶೋಷಣೆ ಮಾಡುತ್ತಿದ್ದಾರೆ ಎಂದು ಆಗಾಗ್ಗೆ ನನ್ನ ಬಳಿ ಹೇಳಿಕೊಳ್ಳುತ್ತಿದ್ದನು ಎಂದು ಅಭಿಷೇಕ್ ತಾಯಿ ಹೇಳಿದ್ದಾರೆ.

ಮಂಗಳವಾರ ಸಂಜೆ ಮಡಿಕೇರಿಗೆ ಭೇಟಿ ನೀಡಿದ್ದ ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಎದುರೇ ಅಭಿಷೇಕ್ ವಿಷ ಸೇವಿಸಿದ್ದಾನೆ. ನಿರ್ವಾಹಕಿ ಗೀತಾ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಅಭಿಷೇಕ್ ಅಧಿಕಾರಿಗಳ ಸಮ್ಮುಖದಲ್ಲಿ ವಿಷ ಸೇವಿಸಿ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿ ಜಯಕರ ಶೆಟ್ಟಿ ಅವರು ಡಿಪೋ ಮ್ಯಾನೇಜರ್ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದರು.

ಮಡಿಕೇರಿ ನಗರ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಅಭಿಷೇಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆಯ ಔಪಚಾರಿಕ ದೂರಿನ ನಂತರವೇ ಎಫ್‌ಐಆರ್ ದಾಖಲಿಸಲಾಗುವುದು ಎಂದು ಇಲಾಖೆಯ ಮೂಲಗಳು ಖಚಿತಪಡಿಸಿವೆ. ಆಸ್ಪತ್ರೆಗೆ ಭೇಟಿ ನೀಡಿದ ಇತರ ಕೆಲವು ನೌಕರರು ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರ ಶೋಷಣೆ ವಿರುದ್ಧ ಧ್ವನಿ ಎತ್ತಿದ್ದಾರೆ. ಡಿಪೋ ಮ್ಯಾನೇಜರ್ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನಗರದಲ್ಲಿ ಹೊಸ ಅಧಿಕಾರಿ ಅಧಿಕಾರ ವಹಿಸಿಕೊಳ್ಳುವವರೆಗೂ ಅವರು ಮಡಿಕೇರಿಯಲ್ಲಿಯೇ ಇರಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!

ದರ್ಶನ್ ಲಾಕಪ್ ಡೆತ್: 'ಸಿಐಡಿ ಅಲ್ಲ.. ನ್ಯಾಯಾಂಗ ತನಿಖೆಗೆ ಒಪ್ಪಿಸಿ': PUCL ಪ್ರತಿಭಟನೆ, ಪೊಲೀಸರಿಂದ ಹಣದ ಆಮಿಷ ಎಂದ ಪತ್ನಿ

2nd ODI: 'ಟಾಸ್, ಇಬ್ಬನಿ, 20 ರನ್ ಗಳ ಕೊರತೆ'..: ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿಗೆ ಕಾರಣ ನೀಡಿದ ನಾಯಕ KL Rahul

2nd ODI: ಸತತ 20ನೇ ಪಂದ್ಯದಲ್ಲೂ Toss ಸೋತ ಭಾರತ, ಜಗತ್ತಿನ ಮೊದಲ ತಂಡ, ಸುನಿಲ್ ಗವಾಸ್ಕರ್ ಗೂ ಆಘಾತ! video

Video: ಕ್ಯಾಚ್ ಡ್ರಾಪ್.. ಮ್ಯಾಚ್ ಡ್ರಾಪ್: ಜೈಸ್ವಾಲ್​ಗೆ ಶಾಕ್ ಕೊಟ್ಟ ಮಾರ್ಕ್ರಾಮ್, ಒಂದು ತಪ್ಪು ಭಾರತಕ್ಕೆ ಮುಳುವಾಯ್ತು!

SCROLL FOR NEXT