ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮೆಡಿಕಲ್ ಕಾಲೇಜು ವತಿಯಿಂದ ಆಯೋಜಿಸಿರುವ “ಕೆ.ಆರ್. ಆಸ್ಪತ್ರೆಯ ಆವರಣದಲ್ಲಿರುವ ಸುಟ್ಟ ಗ್ರಾಯಗಳ ವಿಭಾಗದ ನವೀಕರಣಗೊಂಡ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗದ ಎಂ.ಆರ್.ಐ ಯಂತ್ರೋಪಕರಣ ಹಾಗೂ ಇನ್ನಿತರೆ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದರು 
ರಾಜ್ಯ

ನಮ್ಮಪ್ಪನಿಗೆ ನಾನು ಡಾಕ್ಟ್ರು ಆಗ್ಬೇಕೂಂತ ಆಸೆ ಇತ್ತು; ಹಾಗಾಗಿದ್ದಿದ್ರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ನಿನ್ನೆ ತಮ್ಮ ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡು ವೃತ್ತಿಧರ್ಮದ ಬಗ್ಗೆ ಮಾತನಾಡಿದ್ದಾರೆ.

ಮೈಸೂರು: ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ನಿನ್ನೆ ತಮ್ಮ ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡು ವೃತ್ತಿಧರ್ಮದ ಬಗ್ಗೆ ಮಾತನಾಡಿದ್ದಾರೆ.

ಅದು ಮೈಸೂರಿನ ಕೆ ಆರ್ ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯೊಲಜಿ ವಿಭಾಗ ಹಾಗೂ ಎಂಆರ್ ಐ ಯಂತ್ರೋಪಕರಣ ಉದ್ಘಾಟನೆ ಕಾರ್ಯಕ್ರಮ ಸಂದರ್ಭದಲ್ಲಿ.

ನಾನು ಚಿಕ್ಕವನಿರುವಾಗ ನನಗೂ ಏಪ್ರಾನ್ ಹಾಕೊಂಡು, ಸ್ಟೆತಾಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಎನ್ನುವ ಆಸೆ ಇತ್ತು. ಕೆಆರ್ ಮೆಡಿಕಲ್ ಕಾಲೇಜಿನ ಕ್ಯಾಂಟೀನ್ ಗೆ ನಾನು ಹೈಸ್ಕೂಲ್ ಓದುವಾಗ ಬರುತ್ತಿದ್ದೆ. ಆಗೆಲ್ಲಾ ನನಗೆ ಈ ಆಸೆ ಬರುತ್ತಿತ್ತು. ನಮ್ಮಪ್ಪನಿಗೂ ನಾನು ವೈದ್ಯನಾಗಬೇಕೆಂದು ಆಸೆ ಇತ್ತು. ಆದರೆ, ನನಗೆ ಮೆಡಿಕಲ್ ಸೀಟೇ ಸಿಗಲಿಲ್ಲ, ಮೆಡಿಕಲ್ ಸೀಟು ಸಿಕ್ಕಿದ್ದರೆ ವೈದ್ಯನಾಗುತ್ತಿದ್ದೆ, ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಮನಬಿಚ್ಚಿ ಮಾತನಾಡಿದರು. 

ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಕೂಡ ಸಿಎಂ ಕಿವಿಮಾತು ಹೇಳಿದರು. ಪ್ರತಿಯೊಬ್ಬರೂ ಅವರವರ ವೃತ್ತಿ ಘನತೆಯನ್ನು ಕಾಪಾಡಿಕೊಳ್ಳಬೇಕು. ವೈದ್ಯ ವೃತ್ತಿ‌ ಬಹಳ ಶ್ರೇಷ್ಠವಾದದ್ದು. ನಮ್ಮ ತಪ್ಪಿನಿಂದ ಯಾವ ರೋಗಿಯೂ ಸಾಯಬಾರದು, ನರಳಬಾರದು ಎನ್ನುವ ವೃತ್ತಿ ಘನತೆ ಪ್ರತಿಯೊಬ್ಬ ವೈದ್ಯರಲ್ಲೂ ಇರಬೇಕು ಎಂದು ಕರೆ ನೀಡಿದರು. ಕೆಆರ್‌ ಮೆಡಿಕಲ್ ಕಾಲೇಜು ಸಾವಿರಾರು ವೈದ್ಯರನ್ನು ಈ ದೇಶಕ್ಕೆ ಕೊಟ್ಟಿದೆ. ದೇಶದ ನಾನಾ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲೂ ಈ ಕಾಲೇಜಿನಲ್ಲಿ ಸಿದ್ದಗೊಂಡ ವೈದ್ಯರು ವೃತ್ತಿ ಘನತೆ ಹೆಚ್ಚಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಆರ್ ಆಸ್ಪತ್ರೆಗೆ ಕಾಯಕಲ್ಪ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಪ್ರಸ್ತುತ 1,200 ಹಾಸಿಗೆಗಳಿರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬೇಡಿಕೆ ಇದೆ. ಇದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ