ಎಫ್ಐಆರ್ 
ರಾಜ್ಯ

ಮಮತಾ ಬ್ಯಾನರ್ಜಿ, ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್: ವ್ಯಕ್ತಿ ವಿರುದ್ಧ ಎಫ್ಐಆರ್

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ವ್ಯಕ್ತಿಯೋರ್ವನ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 

ಬೆಂಗಳೂರು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ವ್ಯಕ್ತಿಯೋರ್ವನ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 

ಆರೋಪಿಯನ್ನು ಈಶ್ವರಪ್ಪ ಮುನಿಯಪ್ಪ ಎಂದು ಗುರುತು ಮಾಡಲಾಗಿದ್ದು, ಆತನಿಗಾಗಿ ಶೋಧಕಾರ್ಯಾಚರಣೆ ನಡೆದಿದೆ. 

ಈ ಆರೋಪಿ ಗಣ್ಯರ ವಿರುದ್ಧ ಸರಣಿ ನಿಂದನಾತ್ಮಕ ಹಾಗೂ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕುತ್ತಿದ್ದ. ಸಿಎಂ ಅಷ್ಟೇ ಅಲ್ಲದೇ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವ ಪ್ರಿಯಾಂಕ್ ಖರ್ಗೆ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಬಗ್ಗೆಯೂ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕುತ್ತಿದ್ದ ಎಂದು ತಿಳಿದುಬಂದಿದೆ. 

ಆರೋಪಿ ಸಿಎಂ ಸಿದ್ದರಾಮಯ್ಯ, ಶಿವಕುಮಾರ್ ಮಾಡಿದ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಮೇಲೆ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಟ್‌ಫೀಲ್ಡ್ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಮ್ (ಸಿಇಎನ್) ಪೊಲೀಸ್ ಠಾಣೆ ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿಕೊಂಡು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT